Homeಮುಖಪುಟಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು - ಸಿದ್ದರಾಮಯ್ಯ

ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ

- Advertisement -
- Advertisement -

ಭಾರತ ಚೀನಾ ಗಡಿಯಲ್ಲಿ ಸೈನಿಕರ ಸಾಯುತ್ತಿರುವಾಗ ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದಿದ್ದಾರೆ.

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದು ಅವರು ತಿಳಿಸಿದ್ದಾರೆ.

ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್‌ನಾಥ್ ಸಿಂಗ್ ಅವರು ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂದು ಸಿದ್ದು ಆರೋಪಿಸಿದ್ದಾರೆ.

.@PMOIndia @narendramodi should answer the nation about the reality our soldiers are facing along LAC.On one hand…

Posted by Siddaramaiah on Wednesday, June 17, 2020

ನಮ್ಮ ಸೈನಿಕರು ವಾಸ್ತವಿಕ ಗಡಿ ರೇಖೆಯಲ್ಲಿ ಎದುರಿಸುತ್ತಿರುವ ವಾಸ್ತವತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿ ರಾಷ್ಟ್ರಕ್ಕೆ ಉತ್ತರಿಸಬೇಕು ಎಂದು ಸಿದ್ದು ಆಗ್ರಹಿಸಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಆರೋಗ್ಯ ತುರ್ತುಸ್ಥಿತಿಯನ್ನು ಪರಿಹರಿಸಲು ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಸೇನೆಯು ಒಳನುಗ್ಗುವಿಕೆಯ ವಿರುದ್ಧ ಹೋರಾಡುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚೀನಾ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಹೇಗೆ? ಯಶವಂತ್ ಸಿನ್ಹಾ ಪ್ರಶ್ನೆ 

ಇದನ್ನೂ ಓದಿ: ಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. I am not for or against BJP regarding this matter but Mr. Siddaramayya undoubtedly has no say in this matter… We have seen why he did when women in pink sarees sat on roads With innocent children day and night suffering for their rights….if he chose to remain silent and ignorant as a ruler then.. He better SHUT UP now…

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...