Homeಮುಖಪುಟಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು - ಸಿದ್ದರಾಮಯ್ಯ

ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ

- Advertisement -
- Advertisement -

ಭಾರತ ಚೀನಾ ಗಡಿಯಲ್ಲಿ ಸೈನಿಕರ ಸಾಯುತ್ತಿರುವಾಗ ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದಿದ್ದಾರೆ.

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದು ಅವರು ತಿಳಿಸಿದ್ದಾರೆ.

ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್‌ನಾಥ್ ಸಿಂಗ್ ಅವರು ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂದು ಸಿದ್ದು ಆರೋಪಿಸಿದ್ದಾರೆ.

.@PMOIndia @narendramodi should answer the nation about the reality our soldiers are facing along LAC.On one hand…

Posted by Siddaramaiah on Wednesday, June 17, 2020

ನಮ್ಮ ಸೈನಿಕರು ವಾಸ್ತವಿಕ ಗಡಿ ರೇಖೆಯಲ್ಲಿ ಎದುರಿಸುತ್ತಿರುವ ವಾಸ್ತವತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿ ರಾಷ್ಟ್ರಕ್ಕೆ ಉತ್ತರಿಸಬೇಕು ಎಂದು ಸಿದ್ದು ಆಗ್ರಹಿಸಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಆರೋಗ್ಯ ತುರ್ತುಸ್ಥಿತಿಯನ್ನು ಪರಿಹರಿಸಲು ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಸೇನೆಯು ಒಳನುಗ್ಗುವಿಕೆಯ ವಿರುದ್ಧ ಹೋರಾಡುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚೀನಾ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಹೇಗೆ? ಯಶವಂತ್ ಸಿನ್ಹಾ ಪ್ರಶ್ನೆ 

ಇದನ್ನೂ ಓದಿ: ಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. I am not for or against BJP regarding this matter but Mr. Siddaramayya undoubtedly has no say in this matter… We have seen why he did when women in pink sarees sat on roads With innocent children day and night suffering for their rights….if he chose to remain silent and ignorant as a ruler then.. He better SHUT UP now…

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...