Homeಮುಖಪುಟದೆಹಲಿಯ ಪರಿಸ್ಥಿತಿ ಭಯಾನಕವಾಗಿದೆ; ರೋಗಿಗಳ ಪರಿಸ್ಥಿತಿ ಪ್ರಾಣಿಗಳಿಗಿಂತ ಕೆಟ್ಟದಾಗಿದೆ: ಸುಪ್ರೀಂ ಕೋರ್ಟ್ ಆತಂಕ

ದೆಹಲಿಯ ಪರಿಸ್ಥಿತಿ ಭಯಾನಕವಾಗಿದೆ; ರೋಗಿಗಳ ಪರಿಸ್ಥಿತಿ ಪ್ರಾಣಿಗಳಿಗಿಂತ ಕೆಟ್ಟದಾಗಿದೆ: ಸುಪ್ರೀಂ ಕೋರ್ಟ್ ಆತಂಕ

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯಗಳಿಂದ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ, ಮೃತದೇಹಗಳನ್ನು ನಿರ್ವಹಿಸುವ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರತಿಕ್ರಿಯೆಗಳನ್ನು ಕೋರಿದೆ.

- Advertisement -
- Advertisement -

ದೆಹಲಿಯ ಪರಿಸ್ಥಿತಿಯನ್ನು “ಭಯಾನಕ” ಎಂದು ಹೇಳಿರುವ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರವನ್ನು ಮೃತ ದೇಹಗಳ ಕೆಟ್ಟನಿರ್ವಹಣೆಗಾಗೆ ಖಂಡಿಸಿದೆ. ಅಲ್ಲದೆ ಕೊರೊನಾ ರೋಗಿಗಳಿಗೆ ನೀಡಿದ ಚಿಕಿತ್ಸೆಯು “ಪ್ರಾಣಿಗಳಿಗಿಂತ ಕೆಟ್ಟದಾಗಿದೆ” ಎಂದು ಹೇಳಿದೆ.

ದೆಹಲಿ ಸರ್ಕಾರವೂ ಶವಗಳಿಗೆ ನೀಡಿದ ಕಾಳಜಿಯ ಕೊರತೆಯನ್ನು ಎತ್ತಿ ತೋರಿಸುವ ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್ ಕೆ ಕೌಲ್ ಮತ್ತು ಎಂ ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠ, “ದೆಹಲಿಯ ಪರಿಸ್ಥಿತಿ ಭಯಾನಕ ಹಾಗೂ ಕರುಣಾಜನಕವಾಗಿದೆ” ಎಂದು ಹೇಳಿದೆ.

“ದೆಹಲಿ ಮತ್ತು ಅದರ ಆಸ್ಪತ್ರೆಗಳ ಒಳಗೆ ರೋಗಿಗಳಿಗೆ ನೀಡಿದ ಚಿಕಿತ್ಸೆಯನ್ನು ನೋಡಿ. ರೋಗಿಗಳು ಅಳುತ್ತಿದ್ದಾರೆ, ಯಾರೂ ಅವರನ್ನು ನೋಡಿಕೊಳ್ಳುತ್ತಿಲ್ಲ. ಮಾಧ್ಯಮಗಳು ವರದಿ ಮಾಡಿದಂತೆ ರೋಗಿಗಳ ಸಾವಿನ ನಂತರ ಸಂಬಂಧಿಕರಿಗೆ ಸಹ ಮಾಹಿತಿ ನೀಡಲಾಗುವುದಿಲ್ಲ….” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಮೃತ ದೇಹಗಳನ್ನು ಈ ರೀತಿ ಪರಿಗಣಿಸಲಾಗುತ್ತಿದ್ದರೆ, ಮೃತ ದೇಹಗಳು ಕಸದಲ್ಲಿ ಕಂಡುಬರುತ್ತವೆ! ಮಾಧ್ಯಮಗಳು ಈ ಶೋಚನೀಯ ಪರಿಸ್ಥಿತಿಗಳನ್ನು ಎತ್ತಿ ತೋರಿಸಿದೆ. ಜನರಿಗೆ ಚಿಕಿತ್ಸೆ ನೀಡುತ್ತಿರುವುದು ಪ್ರಾಣಿಗಳಿಗಿಂತ ಕೆಟ್ಟದಾಗಿದೆ ”ಎಂದು ನ್ಯಾಯಮೂರ್ತಿ ಎಂ ಆರ್ ಷಾ ಹೇಳಿದರು.

ರಾಜ್ಯದಲ್ಲಿ ಸಾಂಕ್ರಮಿಕ ರೋಗದ ಪರೀಕ್ಷೆಗಳು ಕಡಿಮೆ ನಡೆಯುತ್ತಿರುವುದಕ್ಕೆ ಅರವಿಂದ್ ಕೇಜ್ರೀವಾಲ್ ಅವರ ಸರ್ಕಾರವನ್ನು ತರಾಟೆಗೆ ಪಡೆದಿರುವ ನ್ಯಾಯಪೀಠ “ದೆಹಲಿಯಲ್ಲಿ ಪರೀಕ್ಷಾ ಸಂಖ್ಯೆ ಯಾಕೆ ಕಡಿಮೆಯಾಗುತ್ತಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಎಂ ಆರ್ ಷಾ ಸರ್ಕಾರಕ್ಕೆ ಹಾಜರಾಗುವಂತೆ ಹೇಳಿದರು.

“ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಾವು ರಾಜ್ಯವನ್ನು ಕೇಳುತ್ತಿದ್ದೇವೆ, ಅಗತ್ಯವಿರುವವರಿಗೆ ಪರೀಕ್ಷೆಯನ್ನು ನಿರಾಕರಿಸಬಾರದು …” ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ನ್ಯಾಯಪೀಠವು ಇತರ ವರದಿಗಳನ್ನು ಉಲ್ಲೇಖಿಸಿ “ಕೊರೊನಾ ವೈರಸ್ ನಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಯಲ್ಲಿ ಪ್ರವೇಶ ಪಡೆಯಲು ಅಲ್ಲಿಂದಿಲ್ಲಿಗೆ ಓಡಾಡುತ್ತಿದ್ದಾರೆ, ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವಿವಿಧ ಹಾಸಿಗೆಗಳು ಖಾಲಿ ಇವೆ …”

“ಮೂಲಸೌಕರ್ಯ ಇರಬೇಕು, ಹಾಸಿಗೆಗಳು ಇರಬೇಕು, ರೋಗಿಗಳನ್ನು ನೋಡಿಕೊಳ್ಳುತ್ತಿಲ್ಲ, ಇದು ಶೋಚನೀಯ ಸ್ಥಿತಿ” ಎಂದು ನ್ಯಾಯಮೂರ್ತಿ ಷಾ ಹೇಳಿದರು.

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯಗಳಿಂದ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ, ಮೃತದೇಹಗಳನ್ನು ನಿರ್ವಹಿಸುವ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರತಿಕ್ರಿಯೆಗಳನ್ನು ಕೋರಿತು.

ಕೊರೊನಾ ರೋಗಿಗಳು ಮತ್ತು ಸೋಂಕಿತ ವ್ಯಕ್ತಿಗಳ ಮೃತ ದೇಹಗಳ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜೂನ್ 17 ರೊಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್  ಕೇಂದ್ರ ಸರ್ಕಾರವನ್ನು ಕೋರಿದೆ.


ಓದಿ: ಜುಲೈ 31 ರೊಳಗೆ ದೆಹಲಿಯಲ್ಲಿ 5.5 ಲಕ್ಷ ಜನರಿಗೆ ಕೊರೊನಾ ಸೋಂಕು!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...