Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಮತ್ತು ಆರೋಗ್ಯ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರದ ಇಬ್ಬರು ಹಿರಿಯ ಮಂತ್ರಿಗಳು ರಾಜ್ಯಯಲ್ಲಿ ವಿಸ್ತೃತ ಲಾಕ್‌ಡೌನ್ ಮಾಡುವ ಸಾಧ್ಯತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವಾರಾಂತ್ಯದಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ.

ಆರೋಗ್ಯ ಸಚಿವ ರಾಜೇಶ್ ಟೊಪೆ, ಮಹಾರಾಷ್ಟ್ರವು ಲಾಕ್‌ಡೌನ್‌‌ನತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್ ಅವರು ಕೂಡಾ ರಾಜ್ಯವು ಲಾಕ್‌ಡೌನ್‌ ಮಾಡುವಂತಹ ಹಾದಿಯಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಹರಡದಂತೆ ತಡೆಯಲು ಬೇಕಾಗಿ ರಾಜ್ಯವು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಒಮ್ಮತ ಮೂಡಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಬಗ್ಗೆಯೂ ಚರ್ಚಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

“ನಾನು ಒಟ್ಟು ಲಾಕ್ಡೌನ್ ಪರವಾಗಿಲ್ಲ ಆದರೆ ರಾಜ್ಯವು ಆ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದರೆ  ಲಾಕ್‌ಡೌನ್ ಮಾಡುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇರುವುದಿಲ್ಲ” ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಕಠಿಣ ನಿರ್ಬಂಧಗಳನ್ನು ಹೊಂದಿರುವ ಎರಡು-ಮೂರು ವಾರಗಳ ಲಾಕ್‌ಡೌನ್ ಸಮಯದಲ್ಲಿ ರಾಜ್ಯವು ತನ್ನ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸಮಯವನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ವ್ಯವಸ್ಥೆಯು ಕುಸಿಯುವ ತಕ್ಷಣದ ಬೆದರಿಕೆ ಸಧ್ಯಕ್ಕೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. “ಆಸ್ಪತ್ರೆಗಳ ಮತ್ತು ವೈದ್ಯರ ಕೊರತೆಯಿದ್ದಾಗ, ನಮಗೆ ಲಾಕ್ ಡೌನ್ ಅಗತ್ಯವಿದೆ. ಸದ್ಯಕ್ಕೆ ನಾವು ಆ ಹಂತವನ್ನು ತಲುಪಿಲ್ಲ, ”ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್, ಮಹಾರಾಷ್ಟ್ರದ ಪರಿಸ್ಥಿತಿ ಅನಿಶ್ಚಿತವಾಗಿದೆ, ತಕ್ಷಣದ ಲಾಕ್ ಡೌನ್ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್ ನೀಡಿದ ಚುನಾವಣಾ ಆಯೋಗ!

“ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ಆಮ್ಲಜನಕದ ಕೊರತೆಯನ್ನು, ಲಸಿಕೆ ಕೊರತೆಯ ಸಮಸ್ಯೆಯನ್ನು ಎದುರಿಸುತ್ತಿದೆ. ಮುಂದಿನ 5 ರಿಂದ 10 ದಿನಗಳಲ್ಲಿ ರೋಗಿಗಳ ಸಂಖ್ಯೆ 5 ಲಕ್ಷದಿಂದ 10 ಲಕ್ಷಕ್ಕೆ ಜಿಗಿಯಲಿದೆ. ಪರಿಸ್ಥಿತಿಯು ಕೈ ಮೀರಲಿದೆ” ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

“ನಾವು ಮೂರು ವಾರಗಳವರೆಗೆ ಕಟ್ಟುನಿಟ್ಟಾದ ಲಾಕ್‌ಡೌನ್ ಮಾಡದಿದ್ದರೆ ಕೊರೊನಾ ಹರಡುವುದನ್ನು ತಡೆಯುವುದು ನಮಗೆ ಕಷ್ಟವಾಗುತ್ತದೆ ಎಂದು ನಾನು ಸಿಎಂಗೆ ಹೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಟ್ಟುನಿಟ್ಟಾದ ಲಾಕ್‌ಡೌನ್‌ನ ಎಂದರೆ ಎಲ್ಲಾ ಅಂಗಡಿಗಳನ್ನು ಮುಚ್ಚುವುದು ಮತ್ತು ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲು ಮಾತ್ರ ಅವಕಾಶ ನೀಡುವುದು ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

ಶನಿವಾರದ ಸರ್ವಪಕ್ಷ ಸಭೆಯು ಈ ವಿಷಯದ ಬಗ್ಗೆ ಒಮ್ಮತವನ್ನು ಮೂಡಿಸಲು ಪ್ರಯತ್ನಿಸುತ್ತದೆ ಎಂದು ಅವರು ಹೇಳಿದರು.

ಈ ಸಭೆಯು ಇಲ್ಲಿಯವರೆಗಿನ ನಿರ್ಬಂಧಗಳ ಪರಿಣಾಮವನ್ನು ಪರಿಶೀಲಿಸುತ್ತದೆ ಮತ್ತು ಮುಂದಿನ ಕೆಲವು ವಾರಗಳವರೆಗೆ ರಾಜ್ಯಕ್ಕೆ ಕಠಿಣವಾದ ನಿರ್ಬಂಧಗಳು ಅಥವಾ ಸಂಪೂರ್ಣ ಲಾಕ್‌ಡೌನ್ ಅಗತ್ಯವಿದೆಯೇ ಎಂದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಹಿರಿಯ ಸಚಿವರು ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಎಂಎನ್‌ಎಸ್ ಮುಖಂಡರು ಹಾಜರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...