Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಮತ್ತು ಆರೋಗ್ಯ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರದ ಇಬ್ಬರು ಹಿರಿಯ ಮಂತ್ರಿಗಳು ರಾಜ್ಯಯಲ್ಲಿ ವಿಸ್ತೃತ ಲಾಕ್‌ಡೌನ್ ಮಾಡುವ ಸಾಧ್ಯತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವಾರಾಂತ್ಯದಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ.

ಆರೋಗ್ಯ ಸಚಿವ ರಾಜೇಶ್ ಟೊಪೆ, ಮಹಾರಾಷ್ಟ್ರವು ಲಾಕ್‌ಡೌನ್‌‌ನತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್ ಅವರು ಕೂಡಾ ರಾಜ್ಯವು ಲಾಕ್‌ಡೌನ್‌ ಮಾಡುವಂತಹ ಹಾದಿಯಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಹರಡದಂತೆ ತಡೆಯಲು ಬೇಕಾಗಿ ರಾಜ್ಯವು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಒಮ್ಮತ ಮೂಡಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಬಗ್ಗೆಯೂ ಚರ್ಚಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

“ನಾನು ಒಟ್ಟು ಲಾಕ್ಡೌನ್ ಪರವಾಗಿಲ್ಲ ಆದರೆ ರಾಜ್ಯವು ಆ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದರೆ  ಲಾಕ್‌ಡೌನ್ ಮಾಡುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇರುವುದಿಲ್ಲ” ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಕಠಿಣ ನಿರ್ಬಂಧಗಳನ್ನು ಹೊಂದಿರುವ ಎರಡು-ಮೂರು ವಾರಗಳ ಲಾಕ್‌ಡೌನ್ ಸಮಯದಲ್ಲಿ ರಾಜ್ಯವು ತನ್ನ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸಮಯವನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ವ್ಯವಸ್ಥೆಯು ಕುಸಿಯುವ ತಕ್ಷಣದ ಬೆದರಿಕೆ ಸಧ್ಯಕ್ಕೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. “ಆಸ್ಪತ್ರೆಗಳ ಮತ್ತು ವೈದ್ಯರ ಕೊರತೆಯಿದ್ದಾಗ, ನಮಗೆ ಲಾಕ್ ಡೌನ್ ಅಗತ್ಯವಿದೆ. ಸದ್ಯಕ್ಕೆ ನಾವು ಆ ಹಂತವನ್ನು ತಲುಪಿಲ್ಲ, ”ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್, ಮಹಾರಾಷ್ಟ್ರದ ಪರಿಸ್ಥಿತಿ ಅನಿಶ್ಚಿತವಾಗಿದೆ, ತಕ್ಷಣದ ಲಾಕ್ ಡೌನ್ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್ ನೀಡಿದ ಚುನಾವಣಾ ಆಯೋಗ!

“ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ಆಮ್ಲಜನಕದ ಕೊರತೆಯನ್ನು, ಲಸಿಕೆ ಕೊರತೆಯ ಸಮಸ್ಯೆಯನ್ನು ಎದುರಿಸುತ್ತಿದೆ. ಮುಂದಿನ 5 ರಿಂದ 10 ದಿನಗಳಲ್ಲಿ ರೋಗಿಗಳ ಸಂಖ್ಯೆ 5 ಲಕ್ಷದಿಂದ 10 ಲಕ್ಷಕ್ಕೆ ಜಿಗಿಯಲಿದೆ. ಪರಿಸ್ಥಿತಿಯು ಕೈ ಮೀರಲಿದೆ” ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

“ನಾವು ಮೂರು ವಾರಗಳವರೆಗೆ ಕಟ್ಟುನಿಟ್ಟಾದ ಲಾಕ್‌ಡೌನ್ ಮಾಡದಿದ್ದರೆ ಕೊರೊನಾ ಹರಡುವುದನ್ನು ತಡೆಯುವುದು ನಮಗೆ ಕಷ್ಟವಾಗುತ್ತದೆ ಎಂದು ನಾನು ಸಿಎಂಗೆ ಹೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಟ್ಟುನಿಟ್ಟಾದ ಲಾಕ್‌ಡೌನ್‌ನ ಎಂದರೆ ಎಲ್ಲಾ ಅಂಗಡಿಗಳನ್ನು ಮುಚ್ಚುವುದು ಮತ್ತು ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲು ಮಾತ್ರ ಅವಕಾಶ ನೀಡುವುದು ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

ಶನಿವಾರದ ಸರ್ವಪಕ್ಷ ಸಭೆಯು ಈ ವಿಷಯದ ಬಗ್ಗೆ ಒಮ್ಮತವನ್ನು ಮೂಡಿಸಲು ಪ್ರಯತ್ನಿಸುತ್ತದೆ ಎಂದು ಅವರು ಹೇಳಿದರು.

ಈ ಸಭೆಯು ಇಲ್ಲಿಯವರೆಗಿನ ನಿರ್ಬಂಧಗಳ ಪರಿಣಾಮವನ್ನು ಪರಿಶೀಲಿಸುತ್ತದೆ ಮತ್ತು ಮುಂದಿನ ಕೆಲವು ವಾರಗಳವರೆಗೆ ರಾಜ್ಯಕ್ಕೆ ಕಠಿಣವಾದ ನಿರ್ಬಂಧಗಳು ಅಥವಾ ಸಂಪೂರ್ಣ ಲಾಕ್‌ಡೌನ್ ಅಗತ್ಯವಿದೆಯೇ ಎಂದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಹಿರಿಯ ಸಚಿವರು ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಎಂಎನ್‌ಎಸ್ ಮುಖಂಡರು ಹಾಜರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...