Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ, ಲಾಕ್‌ಡೌನ್‌ಗೆ ಚಿಂತನೆ: ಸಚಿವ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಮತ್ತು ಆರೋಗ್ಯ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರದ ಇಬ್ಬರು ಹಿರಿಯ ಮಂತ್ರಿಗಳು ರಾಜ್ಯಯಲ್ಲಿ ವಿಸ್ತೃತ ಲಾಕ್‌ಡೌನ್ ಮಾಡುವ ಸಾಧ್ಯತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವಾರಾಂತ್ಯದಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ.

ಆರೋಗ್ಯ ಸಚಿವ ರಾಜೇಶ್ ಟೊಪೆ, ಮಹಾರಾಷ್ಟ್ರವು ಲಾಕ್‌ಡೌನ್‌‌ನತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್ ಅವರು ಕೂಡಾ ರಾಜ್ಯವು ಲಾಕ್‌ಡೌನ್‌ ಮಾಡುವಂತಹ ಹಾದಿಯಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಹರಡದಂತೆ ತಡೆಯಲು ಬೇಕಾಗಿ ರಾಜ್ಯವು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಒಮ್ಮತ ಮೂಡಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಬಗ್ಗೆಯೂ ಚರ್ಚಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

“ನಾನು ಒಟ್ಟು ಲಾಕ್ಡೌನ್ ಪರವಾಗಿಲ್ಲ ಆದರೆ ರಾಜ್ಯವು ಆ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದರೆ  ಲಾಕ್‌ಡೌನ್ ಮಾಡುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇರುವುದಿಲ್ಲ” ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಕಠಿಣ ನಿರ್ಬಂಧಗಳನ್ನು ಹೊಂದಿರುವ ಎರಡು-ಮೂರು ವಾರಗಳ ಲಾಕ್‌ಡೌನ್ ಸಮಯದಲ್ಲಿ ರಾಜ್ಯವು ತನ್ನ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸಮಯವನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ವ್ಯವಸ್ಥೆಯು ಕುಸಿಯುವ ತಕ್ಷಣದ ಬೆದರಿಕೆ ಸಧ್ಯಕ್ಕೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. “ಆಸ್ಪತ್ರೆಗಳ ಮತ್ತು ವೈದ್ಯರ ಕೊರತೆಯಿದ್ದಾಗ, ನಮಗೆ ಲಾಕ್ ಡೌನ್ ಅಗತ್ಯವಿದೆ. ಸದ್ಯಕ್ಕೆ ನಾವು ಆ ಹಂತವನ್ನು ತಲುಪಿಲ್ಲ, ”ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಾಡೆಟ್ಟಿವಾರ್, ಮಹಾರಾಷ್ಟ್ರದ ಪರಿಸ್ಥಿತಿ ಅನಿಶ್ಚಿತವಾಗಿದೆ, ತಕ್ಷಣದ ಲಾಕ್ ಡೌನ್ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್ ನೀಡಿದ ಚುನಾವಣಾ ಆಯೋಗ!

“ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ಆಮ್ಲಜನಕದ ಕೊರತೆಯನ್ನು, ಲಸಿಕೆ ಕೊರತೆಯ ಸಮಸ್ಯೆಯನ್ನು ಎದುರಿಸುತ್ತಿದೆ. ಮುಂದಿನ 5 ರಿಂದ 10 ದಿನಗಳಲ್ಲಿ ರೋಗಿಗಳ ಸಂಖ್ಯೆ 5 ಲಕ್ಷದಿಂದ 10 ಲಕ್ಷಕ್ಕೆ ಜಿಗಿಯಲಿದೆ. ಪರಿಸ್ಥಿತಿಯು ಕೈ ಮೀರಲಿದೆ” ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

“ನಾವು ಮೂರು ವಾರಗಳವರೆಗೆ ಕಟ್ಟುನಿಟ್ಟಾದ ಲಾಕ್‌ಡೌನ್ ಮಾಡದಿದ್ದರೆ ಕೊರೊನಾ ಹರಡುವುದನ್ನು ತಡೆಯುವುದು ನಮಗೆ ಕಷ್ಟವಾಗುತ್ತದೆ ಎಂದು ನಾನು ಸಿಎಂಗೆ ಹೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಟ್ಟುನಿಟ್ಟಾದ ಲಾಕ್‌ಡೌನ್‌ನ ಎಂದರೆ ಎಲ್ಲಾ ಅಂಗಡಿಗಳನ್ನು ಮುಚ್ಚುವುದು ಮತ್ತು ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲು ಮಾತ್ರ ಅವಕಾಶ ನೀಡುವುದು ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.

ಶನಿವಾರದ ಸರ್ವಪಕ್ಷ ಸಭೆಯು ಈ ವಿಷಯದ ಬಗ್ಗೆ ಒಮ್ಮತವನ್ನು ಮೂಡಿಸಲು ಪ್ರಯತ್ನಿಸುತ್ತದೆ ಎಂದು ಅವರು ಹೇಳಿದರು.

ಈ ಸಭೆಯು ಇಲ್ಲಿಯವರೆಗಿನ ನಿರ್ಬಂಧಗಳ ಪರಿಣಾಮವನ್ನು ಪರಿಶೀಲಿಸುತ್ತದೆ ಮತ್ತು ಮುಂದಿನ ಕೆಲವು ವಾರಗಳವರೆಗೆ ರಾಜ್ಯಕ್ಕೆ ಕಠಿಣವಾದ ನಿರ್ಬಂಧಗಳು ಅಥವಾ ಸಂಪೂರ್ಣ ಲಾಕ್‌ಡೌನ್ ಅಗತ್ಯವಿದೆಯೇ ಎಂದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಹಿರಿಯ ಸಚಿವರು ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಎಂಎನ್‌ಎಸ್ ಮುಖಂಡರು ಹಾಜರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...