Homeಕರ್ನಾಟಕಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು...

ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು ಸಭೆ ನಡೆಸಿದ ಸಿಎಂ

- Advertisement -
- Advertisement -

ಮಂಗಳೂರು ಕಾಂಗ್ರೆಸ್ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಹೊರಗಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಗುರುವಾರ ಸಭೆ ನಡೆಸಿದ್ದು ಇದೀಗ ಭಾರಿ ಕುತೂಹಲ ಮೂಡಿಸಿದೆ. ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ

ದಕ್ಷಿಣ ಕನ್ನಡ ಜಿಲ್ಲೆಯ ಹದಗೆಟ್ಟ ಪರಿಸ್ಥಿತಿಯ ಹಿನ್ನಲೆ ಈ ಸಭೆ ನಡೆದಿದೆ ಎನ್ನಲಾಗಿದ್ದು, ಸಭೆಯಲ್ಲಿ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಸಚಿವ ಝಮೀರ್ ಅಹ್ಮದ್ ಕೂಡಾ ಭಾಗವಹಿಸಿದ್ದರು.

ಮಂಗಳೂರಿನ ಪರಿಸ್ಥಿಯ ಬಗ್ಗೆ ಸಭೆ ನಡೆಸುವಾಗ ಸ್ಥಳೀಯ ಪ್ರಭಾವಿ ಶಾಸಕ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊರಗಿಟ್ಟು ನಡೆಸಿದ್ದು ತೀವ್ರ ಕುತೂಹಲ ಮೂಡಿದ್ದು, ಕರಾವಳಿ ನಾಯಕತ್ವದ ಬದಲಾವಣೆ ಆಗಲಿದೆಯೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

ಅದಾಗ್ಯೂ, ಸ್ಪೀಕರ್ ಯು.ಟಿ. ಖಾದರ್ ಅವರು ಹಜ್‌ ಯಾತ್ರೆಯಲ್ಲಿ ಇರುವುದರಿಂದ ಅವರನ್ನು ಸಭೆಯಲ್ಲಿ ಒಳಗೊಳಿಸಲು ಆಗಿಲ್ಲ ಎಂದು ಹೇಳಲಾಗುತ್ತಿದೆಯಾದರೂ, ಉಸ್ತುವಾರಿ ಸಚಿವರನ್ನು ಸಭೆಯಿಂದ ಹೊರಗಿಟ್ಟಿದ್ದು ಯಾಕೆ ಎಂಬ ಪ್ರಶ್ನೆಗಳು ಕೂಡಾ ಮುನ್ನಲೆಗೆ ಬಂದಿವೆ. ಅಲ್ಲದೆ, ಇಬ್ಬರಿಗೂ ಮಾಹಿತಿ ನೀಡದೆ ಈ ಸಭೆಯನ್ನು ನಡೆಸಲಾಗಿದೆ ಎಂದು ಕೂಡಾ ಹೇಳಲಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು,“ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ಯಾವುದೇ ಕಾರಣಕ್ಕೂ ದ್ವೇಷ ಇರಬಾರದು ಎಂಬ ಬಗ್ಗೆಯೂ ಬಿ.ಕೆ ಹರಿಪ್ರಸಾದ್ ಅವರ ಜೊತೆ ಚರ್ಚಿಸಿದೆ” ಎಂದು ಹೇಳಿದ್ದಾರೆ. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ರಾಜಕೀಯ ಉದ್ದೇಶದ ಭೇಟಿಯಲ್ಲ: ಬಿ.ಕೆ ಹರಿಪ್ರಸಾದ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನನ್ನ ನಿವಾಸಕ್ಕೆ ಸೌಹಾರ್ದಿತ ಭೇಟಿ ನೀಡಿದರು. ಮಂಗಳೂರು ಮತ್ತು ಕರಾವಳಿ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಧ್ರುವೀಕರಣದ ಕುರಿತು ಗಂಭೀರ ಚರ್ಚೆ ನಡೆಯಿತು ಎಂದು ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದಾರೆ.

“ಶಾಂತಿ, ಬಾಂಧವ್ಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಕಾಪಾಡುವ ಅಗತ್ಯದ ಬಗ್ಗೆ ಒತ್ತಡ ನೀಡಲಾಯಿತು. ಈ ಭೇಟಿಗೆ ರಾಜಕೀಯ ಉದ್ದೇಶ ಇದೆ ಎಂಬ ಊಹಾಪೋಹಗಳು ಸಂಪೂರ್ಣ ನಿರಾಧಾರ” ಎಂದು ಬಿ.ಕೆ ಹರಿಪ್ರಸಾದ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಡಿಸಿ, ಸಿಇಒಗಳೊಂದಿಗೆ ಎರಡು ದಿನ ಸಭೆ: ಸಿಎಂ

ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ನಡೆಯಲಿರುವ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ

ಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...