Homeಕರ್ನಾಟಕಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

- Advertisement -
- Advertisement -

ನಮಸ್ತೆ ಟ್ರಂ‌ಪ್‌ಗಾಗಿ ಗುಜರಾತಿನ ಅಹಮದಾಬಾದ್‌ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ‌ಸಚಿವ ಪ್ರಿಯಾಂಕ್‌ ಖರ್ಗೆ ಆರ್.ಅಶೋಕ್ ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ. ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ” ಟೀಕಿಸಿದ್ದಾರೆ. 

“ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್‌ನ CEOಯಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ” ಎಂದು ತಿಳಿಸಿದ್ದಾರೆ.

“ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕುಟುಕಿದ್ದಾರೆ.

ಆರ್‌ ಅಶೋಕ್‌ ಹೇಳಿದ್ದೇನು?

“ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದರು.

“ಈಗಲಾದರೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ” ಎಂದು ಪ್ರಶ್ನಿಸಿದ್ದರು.

“ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ನೀಡುತ್ತದೆಯೇ? ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ” ಎಂದು ಅಶೋಕ್ ಟೀಕಿಸಿದ್ದರು.

“ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ”‌ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...