Homeಕರ್ನಾಟಕಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

- Advertisement -
- Advertisement -

ನಮಸ್ತೆ ಟ್ರಂ‌ಪ್‌ಗಾಗಿ ಗುಜರಾತಿನ ಅಹಮದಾಬಾದ್‌ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ‌ಸಚಿವ ಪ್ರಿಯಾಂಕ್‌ ಖರ್ಗೆ ಆರ್.ಅಶೋಕ್ ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ. ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ” ಟೀಕಿಸಿದ್ದಾರೆ. 

“ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್‌ನ CEOಯಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ” ಎಂದು ತಿಳಿಸಿದ್ದಾರೆ.

“ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕುಟುಕಿದ್ದಾರೆ.

ಆರ್‌ ಅಶೋಕ್‌ ಹೇಳಿದ್ದೇನು?

“ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದರು.

“ಈಗಲಾದರೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ” ಎಂದು ಪ್ರಶ್ನಿಸಿದ್ದರು.

“ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ನೀಡುತ್ತದೆಯೇ? ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ” ಎಂದು ಅಶೋಕ್ ಟೀಕಿಸಿದ್ದರು.

“ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ”‌ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...