Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...