Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...