Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...