Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

0
ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ...