Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...