Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...