Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...