Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...