Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...