Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...