Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...