Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...