Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....