Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...