Homeಕರ್ನಾಟಕವಿಶ್ವವಿಖ್ಯಾತ ಮೈಸೂರು ದಸರಾ ಪ್ರಾರಂಭ

ವಿಶ್ವವಿಖ್ಯಾತ ಮೈಸೂರು ದಸರಾ ಪ್ರಾರಂಭ

- Advertisement -
- Advertisement -

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ’ದೇಶಕ್ಕಾಗಿ ಮೃತಪಟ್ಟ ಯೋಧರನ್ನು ಹುತಾತ್ಮರು ಎನ್ನುವಂತೆ, ಕೊರೊನಾ‌ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕೊರೊನಾ ವಾರಿಯರ್‌ಗಳನ್ನು ಕೂಡಾ ಹುತಾತ್ಮರು ಎಂದು ಕರೆಯಬೇಕು’ ಎಂದು ಹೇಳಿದರು.

ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹಾಗೂ ಹೋರಾಟದಲ್ಲಿ ನಿರತರಾದವರಿಗೆ ಪ್ರಶಂಸಾ ಪತ್ರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ ಅವರು, “ದೇಶದಲ್ಲಿ 550 ಕ್ಕೂ ಹೆಚ್ಚು ವೈದ್ಯರು 700 ಕ್ಕೂ ಹೆಚ್ಚು ನರ್ಸ್‌ಗಳು ಮೃತಪಟ್ಟಿದ್ದು, ಅವರೆಲ್ಲರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನ ದೇವಿ ಚಾಮುಂಡಿ ನೀಡಲಿ” ಎಂದು ಪ್ರಾರ್ಥಿಸಿದರು.

ದಸರೆಯ ಇತಿಹಾಸದಲ್ಲಿ ವೈದ್ಯರೊಬ್ಬರಿಗೆ ದಸರಾ ಉದ್ಘಾಟನೆಯ ಭಾಗ್ಯ ಸಿಕ್ಕಿರುವುದು ಜೀವಿತಾವಧಿಯ ಗೌರವ ಎಂದು ಅವರು ಹೇಳಿದರು.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟ ತುಳುನಾಡಿನ ನಿಜ ವಾರಸುದಾರರು

ಬೆಳಗ್ಗೆ 7:45 ರ ಹೊತ್ತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ನವರಾತ್ರಿ ಆಚರಣೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿತ್ತು.

ಇದೇ ವೇಳೆ ಕೋರೋನ ಯೋಧರಾದ ಜಿಲ್ಲಾ ಆಸ್ಪತ್ರೆಯ ಹಿರಿಯ ಶುಶ್ರೂಷಾಧಿಕಾರಿ ಪಿ.ಎಂ.ರುಕ್ಮಿಣಿ, ನಂಜನಗೂಡಿನ ಆಶಾ ಕಾರ್ಯಕರ್ತೆ ನೂರ್ ಜಾನ್, ಪೌರ ಕಾರ್ಮಿಕೆ ಮರಗಮ್ಮ, ಸಾಮಾಜಿಕ ಕಾರ್ಯಕರ್ತ ಅಯ್ಯೂಬ್ ಅಹ್ಮದ್, ಪೊಲೀಸ್ ಕಾನ್ ಸ್ಟೇಬಲ್ ಪಿ.ಕುಮಾರ್, ವೈದ್ಯಾಧಿಕಾರಿ ಡಾ.ನವೀನ್ ಟಿ.ಆರ್. ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ದಸರಾ ಆರಂಭ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ “ಮಂಗಳೂರು ದಸರಾ” ವಿದ್ಯುಕ್ತವಾಗಿ ಆರಂಭಗೊಂಡಿತು. ಕೊರೊನಾ ಯೋಧರಾಗಿರುವ ಎನ್‌ಆರ್‌ಐ ಫೋರಂನ ಮಾಜಿ ಉಪಾಧ್ಯಕ್ಷೆ ಡಾ.ಆರತಿಕೃಷ್ಣ ನವದುರ್ಗೆಯರಿಗೆ ದೀಪವನ್ನು ಬೆಳಗಿಸಿ ದಸರಾ ಆಚರಣೆಗೆ ಚಾಲನೆ ನೀಡಿದರು.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...