Homeಕರ್ನಾಟಕಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು

- Advertisement -
- Advertisement -

ಪಠ್ಯ ಪುಸ್ತಕಗಳ ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ, ನಾಡಿನ ಖ್ಯಾತ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಶುಕ್ರವಾರ ರಾಜ್ಯ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿ ಅವುಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸಲು ಹೇಳಿದೆ.

ಬಿಜೆಪಿ ಪರ ಟ್ರೋಲರ್‌ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಮರು-ಪರಿಷ್ಕರಣೆಯ ನಂತರ, ಕೇಸರೀಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ಕೂಡಾ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಸಮಯದಲ್ಲಿ ನಾಡಿನ ಹಲವಾರು ಪ್ರಸಿದ್ಧ ಸಾಹಿತಿಗಳು ಪಠ್ಯ ಪುಸ್ತಕಗಳಲ್ಲಿ ತಮ್ಮ ಬರಹಗಳನ್ನು ಅಳವಡಿಸಲು ನೀಡಿದ್ದ ಅನುಮತಿಯನ್ನು ನಿರಾಕರಿಸಿದ್ದರು. ಕೇಂದ್ರ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ದೇವನೂರು ಮಹಾದೇವ, ಡಾ.ಜಿ. ರಾಮಕೃಷ್ಣ, ರೂಪಾ ಹಾಸನ, ಈರಪ್ಪ ಎಂ. ಕಂಬಳಿ, ಸತೀಶ್ ಕುಲಕರ್ಣಿ, ಸುಕನ್ಯೆ ಮಾರುತಿ, ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ತಮ್ಮ ಸಾಹಿತ್ಯಗಳನ್ನು ಸೇರಿಸದಂತೆ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಂಡಿದ್ದರು.

ಇದರ ನಂತರ ರಾಜ್ಯ ಸರ್ಕಾರವು ಸಾಹಿತಿಗಳಿಗೆ ಪತ್ರ ಬರೆದು ತಮ್ಮ ನಿರ್ಧಾವನ್ನು ಬದಲಿಸುವಂತೆ ಮತ್ತು ಅವರ ಸಾಹಿತ್ಯಗಳನ್ನು ಶಾಲಾ ಪಠ್ಯಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೇಳಿಕೊಂಡಿತ್ತು. ಆದರೆ ಸಾಹಿತಿಗಳು ಕೇಸರಿಕರಣದ ವಿರುದ್ಧ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದು, ಅನುಮತಿ ನೀಡುವುದಿಲ್ಲ ಎಂದು ಮರುಪತ್ರ ಬರೆದಿದ್ದರು.

ಇದನ್ನೂ ಓದಿ: ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಇದರ ನಂತರ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’, ಡಾ.ಜಿ. ರಾಮಕೃಷ್ಣ ಅವರ ‘ಭಗತ್‌ ಸಿಂಗ್‌’, ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’, ಈರಪ್ಪ ಎಂ. ಕಂಬಳಿ ಅವರ ‘ಹೀಗೊಂದು ಟಾಪ್ ಪ್ರಯಾಣ’, ಸತೀಶ್ ಕುಲಕರ್ಣಿ ಅವರ ‘ಕಟ್ಟತೇವ ನಾವು’, ಸುಕನ್ಯ ಮಾರುತಿ ಅವರ ‘ಏಣಿ’ ಹಾಗೂ ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ಬರೆದಿರುವ ‘ಡಾ. ರಾಜ್‌ಕುಮಾರ್‌’ ಅವರು ಪಠ್ಯಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸುವಂತೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಡ್ಡಿ ಗಳಿಗೆ ಅದೇ ಬೇಕಾಗಿರೋದು
    ಮುಂದಿನ ತಲೆಾರುಗಳನ್ನು ದೇವರೇ ಕಾಪಾಡಬೇಕು

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...