Homeಕರ್ನಾಟಕಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು

- Advertisement -
- Advertisement -

ಪಠ್ಯ ಪುಸ್ತಕಗಳ ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ, ನಾಡಿನ ಖ್ಯಾತ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಶುಕ್ರವಾರ ರಾಜ್ಯ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿ ಅವುಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸಲು ಹೇಳಿದೆ.

ಬಿಜೆಪಿ ಪರ ಟ್ರೋಲರ್‌ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಮರು-ಪರಿಷ್ಕರಣೆಯ ನಂತರ, ಕೇಸರೀಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ಕೂಡಾ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಸಮಯದಲ್ಲಿ ನಾಡಿನ ಹಲವಾರು ಪ್ರಸಿದ್ಧ ಸಾಹಿತಿಗಳು ಪಠ್ಯ ಪುಸ್ತಕಗಳಲ್ಲಿ ತಮ್ಮ ಬರಹಗಳನ್ನು ಅಳವಡಿಸಲು ನೀಡಿದ್ದ ಅನುಮತಿಯನ್ನು ನಿರಾಕರಿಸಿದ್ದರು. ಕೇಂದ್ರ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ದೇವನೂರು ಮಹಾದೇವ, ಡಾ.ಜಿ. ರಾಮಕೃಷ್ಣ, ರೂಪಾ ಹಾಸನ, ಈರಪ್ಪ ಎಂ. ಕಂಬಳಿ, ಸತೀಶ್ ಕುಲಕರ್ಣಿ, ಸುಕನ್ಯೆ ಮಾರುತಿ, ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ತಮ್ಮ ಸಾಹಿತ್ಯಗಳನ್ನು ಸೇರಿಸದಂತೆ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಂಡಿದ್ದರು.

ಇದರ ನಂತರ ರಾಜ್ಯ ಸರ್ಕಾರವು ಸಾಹಿತಿಗಳಿಗೆ ಪತ್ರ ಬರೆದು ತಮ್ಮ ನಿರ್ಧಾವನ್ನು ಬದಲಿಸುವಂತೆ ಮತ್ತು ಅವರ ಸಾಹಿತ್ಯಗಳನ್ನು ಶಾಲಾ ಪಠ್ಯಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೇಳಿಕೊಂಡಿತ್ತು. ಆದರೆ ಸಾಹಿತಿಗಳು ಕೇಸರಿಕರಣದ ವಿರುದ್ಧ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದು, ಅನುಮತಿ ನೀಡುವುದಿಲ್ಲ ಎಂದು ಮರುಪತ್ರ ಬರೆದಿದ್ದರು.

ಇದನ್ನೂ ಓದಿ: ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಇದರ ನಂತರ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’, ಡಾ.ಜಿ. ರಾಮಕೃಷ್ಣ ಅವರ ‘ಭಗತ್‌ ಸಿಂಗ್‌’, ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’, ಈರಪ್ಪ ಎಂ. ಕಂಬಳಿ ಅವರ ‘ಹೀಗೊಂದು ಟಾಪ್ ಪ್ರಯಾಣ’, ಸತೀಶ್ ಕುಲಕರ್ಣಿ ಅವರ ‘ಕಟ್ಟತೇವ ನಾವು’, ಸುಕನ್ಯ ಮಾರುತಿ ಅವರ ‘ಏಣಿ’ ಹಾಗೂ ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ಬರೆದಿರುವ ‘ಡಾ. ರಾಜ್‌ಕುಮಾರ್‌’ ಅವರು ಪಠ್ಯಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸುವಂತೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಡ್ಡಿ ಗಳಿಗೆ ಅದೇ ಬೇಕಾಗಿರೋದು
    ಮುಂದಿನ ತಲೆಾರುಗಳನ್ನು ದೇವರೇ ಕಾಪಾಡಬೇಕು

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...