Homeಕರ್ನಾಟಕಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು

- Advertisement -
- Advertisement -

ಪಠ್ಯ ಪುಸ್ತಕಗಳ ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ, ನಾಡಿನ ಖ್ಯಾತ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಶುಕ್ರವಾರ ರಾಜ್ಯ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿ ಅವುಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸಲು ಹೇಳಿದೆ.

ಬಿಜೆಪಿ ಪರ ಟ್ರೋಲರ್‌ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಮರು-ಪರಿಷ್ಕರಣೆಯ ನಂತರ, ಕೇಸರೀಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ಕೂಡಾ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಸಮಯದಲ್ಲಿ ನಾಡಿನ ಹಲವಾರು ಪ್ರಸಿದ್ಧ ಸಾಹಿತಿಗಳು ಪಠ್ಯ ಪುಸ್ತಕಗಳಲ್ಲಿ ತಮ್ಮ ಬರಹಗಳನ್ನು ಅಳವಡಿಸಲು ನೀಡಿದ್ದ ಅನುಮತಿಯನ್ನು ನಿರಾಕರಿಸಿದ್ದರು. ಕೇಂದ್ರ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ದೇವನೂರು ಮಹಾದೇವ, ಡಾ.ಜಿ. ರಾಮಕೃಷ್ಣ, ರೂಪಾ ಹಾಸನ, ಈರಪ್ಪ ಎಂ. ಕಂಬಳಿ, ಸತೀಶ್ ಕುಲಕರ್ಣಿ, ಸುಕನ್ಯೆ ಮಾರುತಿ, ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ತಮ್ಮ ಸಾಹಿತ್ಯಗಳನ್ನು ಸೇರಿಸದಂತೆ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಂಡಿದ್ದರು.

ಇದರ ನಂತರ ರಾಜ್ಯ ಸರ್ಕಾರವು ಸಾಹಿತಿಗಳಿಗೆ ಪತ್ರ ಬರೆದು ತಮ್ಮ ನಿರ್ಧಾವನ್ನು ಬದಲಿಸುವಂತೆ ಮತ್ತು ಅವರ ಸಾಹಿತ್ಯಗಳನ್ನು ಶಾಲಾ ಪಠ್ಯಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೇಳಿಕೊಂಡಿತ್ತು. ಆದರೆ ಸಾಹಿತಿಗಳು ಕೇಸರಿಕರಣದ ವಿರುದ್ಧ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದು, ಅನುಮತಿ ನೀಡುವುದಿಲ್ಲ ಎಂದು ಮರುಪತ್ರ ಬರೆದಿದ್ದರು.

ಇದನ್ನೂ ಓದಿ: ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಇದರ ನಂತರ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’, ಡಾ.ಜಿ. ರಾಮಕೃಷ್ಣ ಅವರ ‘ಭಗತ್‌ ಸಿಂಗ್‌’, ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’, ಈರಪ್ಪ ಎಂ. ಕಂಬಳಿ ಅವರ ‘ಹೀಗೊಂದು ಟಾಪ್ ಪ್ರಯಾಣ’, ಸತೀಶ್ ಕುಲಕರ್ಣಿ ಅವರ ‘ಕಟ್ಟತೇವ ನಾವು’, ಸುಕನ್ಯ ಮಾರುತಿ ಅವರ ‘ಏಣಿ’ ಹಾಗೂ ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ಬರೆದಿರುವ ‘ಡಾ. ರಾಜ್‌ಕುಮಾರ್‌’ ಅವರು ಪಠ್ಯಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸುವಂತೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಡ್ಡಿ ಗಳಿಗೆ ಅದೇ ಬೇಕಾಗಿರೋದು
    ಮುಂದಿನ ತಲೆಾರುಗಳನ್ನು ದೇವರೇ ಕಾಪಾಡಬೇಕು

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...