Homeಕರ್ನಾಟಕಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು

- Advertisement -
- Advertisement -

ಪಠ್ಯ ಪುಸ್ತಕಗಳ ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ, ನಾಡಿನ ಖ್ಯಾತ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಶುಕ್ರವಾರ ರಾಜ್ಯ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿ ಅವುಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸಲು ಹೇಳಿದೆ.

ಬಿಜೆಪಿ ಪರ ಟ್ರೋಲರ್‌ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಮರು-ಪರಿಷ್ಕರಣೆಯ ನಂತರ, ಕೇಸರೀಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ಕೂಡಾ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಸಮಯದಲ್ಲಿ ನಾಡಿನ ಹಲವಾರು ಪ್ರಸಿದ್ಧ ಸಾಹಿತಿಗಳು ಪಠ್ಯ ಪುಸ್ತಕಗಳಲ್ಲಿ ತಮ್ಮ ಬರಹಗಳನ್ನು ಅಳವಡಿಸಲು ನೀಡಿದ್ದ ಅನುಮತಿಯನ್ನು ನಿರಾಕರಿಸಿದ್ದರು. ಕೇಂದ್ರ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ದೇವನೂರು ಮಹಾದೇವ, ಡಾ.ಜಿ. ರಾಮಕೃಷ್ಣ, ರೂಪಾ ಹಾಸನ, ಈರಪ್ಪ ಎಂ. ಕಂಬಳಿ, ಸತೀಶ್ ಕುಲಕರ್ಣಿ, ಸುಕನ್ಯೆ ಮಾರುತಿ, ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ತಮ್ಮ ಸಾಹಿತ್ಯಗಳನ್ನು ಸೇರಿಸದಂತೆ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಂಡಿದ್ದರು.

ಇದರ ನಂತರ ರಾಜ್ಯ ಸರ್ಕಾರವು ಸಾಹಿತಿಗಳಿಗೆ ಪತ್ರ ಬರೆದು ತಮ್ಮ ನಿರ್ಧಾವನ್ನು ಬದಲಿಸುವಂತೆ ಮತ್ತು ಅವರ ಸಾಹಿತ್ಯಗಳನ್ನು ಶಾಲಾ ಪಠ್ಯಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೇಳಿಕೊಂಡಿತ್ತು. ಆದರೆ ಸಾಹಿತಿಗಳು ಕೇಸರಿಕರಣದ ವಿರುದ್ಧ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದು, ಅನುಮತಿ ನೀಡುವುದಿಲ್ಲ ಎಂದು ಮರುಪತ್ರ ಬರೆದಿದ್ದರು.

ಇದನ್ನೂ ಓದಿ: ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಇದರ ನಂತರ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’, ಡಾ.ಜಿ. ರಾಮಕೃಷ್ಣ ಅವರ ‘ಭಗತ್‌ ಸಿಂಗ್‌’, ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’, ಈರಪ್ಪ ಎಂ. ಕಂಬಳಿ ಅವರ ‘ಹೀಗೊಂದು ಟಾಪ್ ಪ್ರಯಾಣ’, ಸತೀಶ್ ಕುಲಕರ್ಣಿ ಅವರ ‘ಕಟ್ಟತೇವ ನಾವು’, ಸುಕನ್ಯ ಮಾರುತಿ ಅವರ ‘ಏಣಿ’ ಹಾಗೂ ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ಬರೆದಿರುವ ‘ಡಾ. ರಾಜ್‌ಕುಮಾರ್‌’ ಅವರು ಪಠ್ಯಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸುವಂತೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಡ್ಡಿ ಗಳಿಗೆ ಅದೇ ಬೇಕಾಗಿರೋದು
    ಮುಂದಿನ ತಲೆಾರುಗಳನ್ನು ದೇವರೇ ಕಾಪಾಡಬೇಕು

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...