Homeಕರ್ನಾಟಕಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ

- Advertisement -
- Advertisement -

ಕರ್ನಾಟಕ ಸರ್ಕಾರ ‘ಕನ್ನಡಿಗರಿಗೆ’ ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ಕಾಯ್ದಿರಿಸುವ ಆದೇಶ ಹೊರಡಿಸಿದ್ದು, ಖಾಸಗಿ ವಲಯದಲ್ಲಿ ಕೂಡಾ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದೆ.

ಈ ಆದೇಶದಂತೆ ಗುಮಾಸ್ತರು, ಅಕೌಂಟೆಂಟ್‌ಗಳು, ಮೇಲ್ವಿಚಾರಕರು, ಪಿಯೋನ್‌ಗಳು, ಸಹಾಯಕರು ಮತ್ತು ಇತರ ಕಚೇರಿ ಸಿಬ್ಬಂದಿಗಳನ್ನು ಒಳಗೊಂಡಿರುವ ಗ್ರೂಪ್ ಸಿ ಮತ್ತು ಡಿ ವಿಭಾಗಗಳಲ್ಲಿ ‘ಕನ್ನಡಿಗರನ್ನು’ ಮಾತ್ರ ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಕನ್ನಡ ಪರ ಸಂಘಟನೆಗಳ ದೀರ್ಘಕಾಲದ ಬೇಡಿಕೆ ಸಧ್ಯಕ್ಕೆ ಈಡೇರಿದೆಯಾದರೂ ಇದು ಹಲವಾರು ಕಾನೂನು ತೊಡಕುಗಳನ್ನು ಎದುರಿಸುತ್ತದೆ ಎನ್ನಲಾಗಿದೆ.

ಸರ್ಕಾರದ ಈ ನಿರ್ಧಾರವನ್ನು ಸೆಪ್ಟೆಂಬರ್ 24 ರಂದು ವಿಧಾನಸಭೆಯ ಅಧಿವೇಶನದಲ್ಲಿ ಕಾನೂನು ಸಚಿವ ಜೆ.ಸಿ.ಮಧುಸ್ವಾಮಿ ಘೋಷಿಸಿದ್ದರು. ಸರ್ಕಾರಿ ಇಲಾಖೆಗಳಲ್ಲಿ ಅಥವಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್‌ಯು) ಮಾತ್ರವಲ್ಲದೆ ಖಾಸಗಿ ಕಂಪನಿಗಳಲ್ಲಿಯೂ ರಾಜ್ಯದ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದರು.

ಎ ಮತ್ತು ಬಿ ವಿಭಾಗದಲ್ಲಿ ಕೂಡಾ ಕನ್ನಡಿಗರಿಗೆ ಆದ್ಯತೆ ನೀಡಬೇಕು, ಇದರಲ್ಲಿ ಕಂಪನಿಯ ನಿರ್ವಹಣಾ ಮಟ್ಟದ ಹುದ್ದೆಗಳಲ್ಲಿಯು ಮೀಸಲಾತಿ ಇರಬೇಕೆಂದು ನಿರ್ದೇಶನ ಒತ್ತಿಹೇಳಿದೆ. “ಸರ್ಕಾರವು ನೀಡುವ ಪ್ರಯೋಜನಗಳು ಮತ್ತು ರಿಯಾಯಿತಿಗಳನ್ನು ಪಡೆದುಕೊಂಡಿರುವ ಎಲ್ಲಾ ಕೈಗಾರಿಕೆಗಳು ಮತ್ತು ಕಂಪೆನಿಗಳಿಗೆ ಇದು ಅನ್ವಯಿಸುತ್ತದೆ” ಎಂದು ಮಧುಸ್ವಾಮಿ ಹೇಳಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

“ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ” ಎಂದು ನಿರ್ದೇಶನವು ಹೇಳಿದೆ.

ರಾಜ್ಯ ಸರ್ಕಾರವು ಈ ಘೋಷಣೆ ಮಾಡಿದ್ದರೂ, ಅದನ್ನು ಅನುಷ್ಠಾನಗೊಳಿಸುವಲ್ಲಿ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರಿ ಮೂಲವೊಂದನ್ನು ಉಲ್ಲೇಖಿಸಿ ದಿ ಪ್ರಿಂಟ್ ಹೇಳಿದೆ. “ಸುಪ್ರೀಂ ಕೋರ್ಟ್‌ ಜೂನ್‌ನಲ್ಲಿ ಮಾಡಿದ ಆದೇಶವು ದೊಡ್ಡ ಅಡಚಣೆಯಾಗಿದೆ”. ಆದೇಶದಲ್ಲಿ “ಮೀಸಲಾತಿಯು ಮೂಲಭೂತ ಹಕ್ಕಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಜನರನ್ನು ಹುದ್ದಗೆ ನೇಮಿಸಿಕೊಳ್ಳಲು ಯಾವುದೇ ಸರ್ಕಾರವು ಕಂಪನಿಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಅದು ಸೂಚಿಸಿತ್ತು.

ಅದಾಗ್ಯೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್,‌ ಈ ನಿರ್ಧಾರವನ್ನು ಜಾರಿಗೆ ತರುವ ಪ್ರಕ್ರಿಯೆಯನ್ನು ಸರ್ಕಾರ ಈಗಾಗಲೇ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...