Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ- ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” (ಗೋಹತ್ಯೆ ನಿಷೇಧ ಮಸೂದೆ)ಗೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲಾಗಿದೆ. ಸುಗ್ರೀವಾಜ್ಞೆಯ ಅಂಕಿತಕ್ಕೆ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಪ್ರಸ್ತುತ ಮಸೂದೆ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್ತಿನಲ್ಲಿ ಅದಕ್ಕೆ ತಡೆಯಾಗಿತ್ತು. ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದ್ದು, “ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನನ್ನೂ ಕೂಡಾ ಜಾರಿಗೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

ಡಿಸಂಬರ್ 28 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು, “ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

“ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ 1964ರ ಕಾಯ್ದೆಯಲ್ಲಿ ಲೋಪಗಳಿದ್ದ ಹಿನ್ನೆಲೆ, ಕೆಲ ತಿದ್ದುಪಡಿ ಮಾಡಲಾಗಿದೆ. 1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ. ದನದ ಮಾಂಸ ತಿನ್ನುವುದಕ್ಕೆ ನಾವು ಯಾವುದೇ ನಿಷೇಧವನ್ನು ಹೇರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“1964 ರ ಕಾಯ್ದೆಯಲ್ಲಿ ಜಾನುವಾರುಗಳ ಹತ್ಯೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಅವಕಾಶವಿರಲಿಲ್ಲ. ಇದೀಗ ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ. ಹಳೆಯ ಕಾನೂನು ಬಿಗಿಯಾಗಿರಲಿಲ್ಲ. ಈಗಿನ ಕಾಯ್ದೆಯಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಿದರೆ ಅದನ್ನು ವಶಕ್ಕೆ ಪಡೆಯಲಾಗುವುದು. ಅಲ್ಲದೆ, ವಾಹನವನ್ನು ಬ್ಯಾಂಕ್ ಗ್ಯಾರಂಟಿ ಮೂಲಕ ಹಿಂಪಡೆಯಬಹುದು” ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...