Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ- ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” (ಗೋಹತ್ಯೆ ನಿಷೇಧ ಮಸೂದೆ)ಗೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲಾಗಿದೆ. ಸುಗ್ರೀವಾಜ್ಞೆಯ ಅಂಕಿತಕ್ಕೆ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಪ್ರಸ್ತುತ ಮಸೂದೆ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್ತಿನಲ್ಲಿ ಅದಕ್ಕೆ ತಡೆಯಾಗಿತ್ತು. ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದ್ದು, “ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನನ್ನೂ ಕೂಡಾ ಜಾರಿಗೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

ಡಿಸಂಬರ್ 28 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು, “ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

“ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ 1964ರ ಕಾಯ್ದೆಯಲ್ಲಿ ಲೋಪಗಳಿದ್ದ ಹಿನ್ನೆಲೆ, ಕೆಲ ತಿದ್ದುಪಡಿ ಮಾಡಲಾಗಿದೆ. 1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ. ದನದ ಮಾಂಸ ತಿನ್ನುವುದಕ್ಕೆ ನಾವು ಯಾವುದೇ ನಿಷೇಧವನ್ನು ಹೇರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“1964 ರ ಕಾಯ್ದೆಯಲ್ಲಿ ಜಾನುವಾರುಗಳ ಹತ್ಯೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಅವಕಾಶವಿರಲಿಲ್ಲ. ಇದೀಗ ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ. ಹಳೆಯ ಕಾನೂನು ಬಿಗಿಯಾಗಿರಲಿಲ್ಲ. ಈಗಿನ ಕಾಯ್ದೆಯಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಿದರೆ ಅದನ್ನು ವಶಕ್ಕೆ ಪಡೆಯಲಾಗುವುದು. ಅಲ್ಲದೆ, ವಾಹನವನ್ನು ಬ್ಯಾಂಕ್ ಗ್ಯಾರಂಟಿ ಮೂಲಕ ಹಿಂಪಡೆಯಬಹುದು” ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...