Homeಕರ್ನಾಟಕದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯ ಸರ್ಕಾರವು ನವೆಂಬರ್ 5 ರ ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ‘ಗೋ ಪೂಜೆ’ ಮಾಡಲು ಆದೇಶಿಸಿದೆ. ಹಿಂದೂ ಪಂಚಾಂಗದ ಪ್ರಕಾರ ‘ಗೋಧೂಳಿ ಲಗ್ನ’ದ ಶುಭ ಮುಹೂರ್ತದಲ್ಲಿ ಬರುವ ‘ಬಲಿಪಾಡ್ಯಮಿ’ಯಂದು ಸಂಜೆ 5:30 ರಿಂದ 6:30 ರವರೆಗೆ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ನಡೆಸುವಂತೆ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಆದೇಶವು ನಿರ್ದೇಶಿಸುತ್ತದೆ.

ಆದೇಶದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಹಸುಗಳಿಗೆ ಸ್ನಾನ ಮಾಡಿಸಿ, ಹೂವುಗಳಿಂದ ಅಲಂಕರಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿ ಬಾಳೆಹಣ್ಣು, ಬೆಲ್ಲ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳನ್ನು ಅರ್ಪಿಸಿ ಪೂಜೆ ನಡೆಸಬೇಕಾಗಿದೆ.

ಇದನ್ನೂ ಓದಿ: ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ‘ಗೋ ಪೂಜೆ’ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದಿಂದ ದೀಪಾವಳಿ ಸಂದರ್ಭದಲ್ಲಿ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

“ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ. ಶ್ರೀಮದ್‌ ಭಗವದ್ಗೀತೆ, ಭಾಗವತ ಮಹಾಪುರಾಣ, ಮುಂತಾದ ಪುರಾಣಗಳಲ್ಲಿ ಗೋವುಗಳ ಮಹತ್ವಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣುತ್ತೇವೆ. ಹಾಗೆಯೇ; ಅನಾದಿಕಾಲದಿಂದಲೂ ಹಿಂದೂ ಧರ್ಮದವರು ಭಾರತ ದೇಶದಲ್ಲಿ ಗೋಮಾತೆಯನ್ನು ಕಾಲ ಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ” ಎಂದು ಆದೇಶವು ಹೇಳುತ್ತದೆ.

“ಹಿಂದೂಗಳು ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೊವೂಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ. ಸಿಹಿ ತಿನಿಸುಗಳನ್ನು ನೀಡಿ /ಕೊಟ್ಟು ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಷೂಜೆಯನ್ನು /ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ” ಎಂದು ಅದು ತಿಳಿಸಿದೆ.

“ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆಯೆಂದು ತಿಳಿದು ಪೂಜಿಸುವ ಸಂಪ್ರದಾಯ/ ಪದ್ದತಿ ಬಿಡಬಾರದೆಂಬ ದೃಷ್ಠಿಯಿಂದ, ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸತ್ಸಂಪ್ರದಾಯ ಮುಂದುವರೆಸುವ ದೃಷ್ಠಿಯಿಂದ ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ /ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ, ಸನಾತನ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು, ಸಂಪ್ರಾದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ /ಬಲಿಪಾಡ್ಯಮಿಯ ಹಬ್ಬದ ದಿನದಂದು ‘ಗೋ ಪೂಜೆ’ ನೆಡೆಸಿ ಜಾರಿಗೊಳಿಸುವುದು ಸೂಕ್ತವು, ಶಾಸ್ತ್ರ ಸಮೃತವು ಆಗಿರುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...