Homeಕರ್ನಾಟಕದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯ ಸರ್ಕಾರವು ನವೆಂಬರ್ 5 ರ ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ‘ಗೋ ಪೂಜೆ’ ಮಾಡಲು ಆದೇಶಿಸಿದೆ. ಹಿಂದೂ ಪಂಚಾಂಗದ ಪ್ರಕಾರ ‘ಗೋಧೂಳಿ ಲಗ್ನ’ದ ಶುಭ ಮುಹೂರ್ತದಲ್ಲಿ ಬರುವ ‘ಬಲಿಪಾಡ್ಯಮಿ’ಯಂದು ಸಂಜೆ 5:30 ರಿಂದ 6:30 ರವರೆಗೆ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ನಡೆಸುವಂತೆ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಆದೇಶವು ನಿರ್ದೇಶಿಸುತ್ತದೆ.

ಆದೇಶದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಹಸುಗಳಿಗೆ ಸ್ನಾನ ಮಾಡಿಸಿ, ಹೂವುಗಳಿಂದ ಅಲಂಕರಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿ ಬಾಳೆಹಣ್ಣು, ಬೆಲ್ಲ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳನ್ನು ಅರ್ಪಿಸಿ ಪೂಜೆ ನಡೆಸಬೇಕಾಗಿದೆ.

ಇದನ್ನೂ ಓದಿ: ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ‘ಗೋ ಪೂಜೆ’ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದಿಂದ ದೀಪಾವಳಿ ಸಂದರ್ಭದಲ್ಲಿ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

“ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ. ಶ್ರೀಮದ್‌ ಭಗವದ್ಗೀತೆ, ಭಾಗವತ ಮಹಾಪುರಾಣ, ಮುಂತಾದ ಪುರಾಣಗಳಲ್ಲಿ ಗೋವುಗಳ ಮಹತ್ವಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣುತ್ತೇವೆ. ಹಾಗೆಯೇ; ಅನಾದಿಕಾಲದಿಂದಲೂ ಹಿಂದೂ ಧರ್ಮದವರು ಭಾರತ ದೇಶದಲ್ಲಿ ಗೋಮಾತೆಯನ್ನು ಕಾಲ ಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ” ಎಂದು ಆದೇಶವು ಹೇಳುತ್ತದೆ.

“ಹಿಂದೂಗಳು ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೊವೂಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ. ಸಿಹಿ ತಿನಿಸುಗಳನ್ನು ನೀಡಿ /ಕೊಟ್ಟು ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಷೂಜೆಯನ್ನು /ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ” ಎಂದು ಅದು ತಿಳಿಸಿದೆ.

“ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆಯೆಂದು ತಿಳಿದು ಪೂಜಿಸುವ ಸಂಪ್ರದಾಯ/ ಪದ್ದತಿ ಬಿಡಬಾರದೆಂಬ ದೃಷ್ಠಿಯಿಂದ, ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸತ್ಸಂಪ್ರದಾಯ ಮುಂದುವರೆಸುವ ದೃಷ್ಠಿಯಿಂದ ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ /ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ, ಸನಾತನ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು, ಸಂಪ್ರಾದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ /ಬಲಿಪಾಡ್ಯಮಿಯ ಹಬ್ಬದ ದಿನದಂದು ‘ಗೋ ಪೂಜೆ’ ನೆಡೆಸಿ ಜಾರಿಗೊಳಿಸುವುದು ಸೂಕ್ತವು, ಶಾಸ್ತ್ರ ಸಮೃತವು ಆಗಿರುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...