Homeಕರ್ನಾಟಕದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯ ಸರ್ಕಾರವು ನವೆಂಬರ್ 5 ರ ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ‘ಗೋ ಪೂಜೆ’ ಮಾಡಲು ಆದೇಶಿಸಿದೆ. ಹಿಂದೂ ಪಂಚಾಂಗದ ಪ್ರಕಾರ ‘ಗೋಧೂಳಿ ಲಗ್ನ’ದ ಶುಭ ಮುಹೂರ್ತದಲ್ಲಿ ಬರುವ ‘ಬಲಿಪಾಡ್ಯಮಿ’ಯಂದು ಸಂಜೆ 5:30 ರಿಂದ 6:30 ರವರೆಗೆ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ನಡೆಸುವಂತೆ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಆದೇಶವು ನಿರ್ದೇಶಿಸುತ್ತದೆ.

ಆದೇಶದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಹಸುಗಳಿಗೆ ಸ್ನಾನ ಮಾಡಿಸಿ, ಹೂವುಗಳಿಂದ ಅಲಂಕರಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿ ಬಾಳೆಹಣ್ಣು, ಬೆಲ್ಲ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳನ್ನು ಅರ್ಪಿಸಿ ಪೂಜೆ ನಡೆಸಬೇಕಾಗಿದೆ.

ಇದನ್ನೂ ಓದಿ: ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ‘ಗೋ ಪೂಜೆ’ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದಿಂದ ದೀಪಾವಳಿ ಸಂದರ್ಭದಲ್ಲಿ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

“ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ. ಶ್ರೀಮದ್‌ ಭಗವದ್ಗೀತೆ, ಭಾಗವತ ಮಹಾಪುರಾಣ, ಮುಂತಾದ ಪುರಾಣಗಳಲ್ಲಿ ಗೋವುಗಳ ಮಹತ್ವಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣುತ್ತೇವೆ. ಹಾಗೆಯೇ; ಅನಾದಿಕಾಲದಿಂದಲೂ ಹಿಂದೂ ಧರ್ಮದವರು ಭಾರತ ದೇಶದಲ್ಲಿ ಗೋಮಾತೆಯನ್ನು ಕಾಲ ಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ” ಎಂದು ಆದೇಶವು ಹೇಳುತ್ತದೆ.

“ಹಿಂದೂಗಳು ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೊವೂಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ. ಸಿಹಿ ತಿನಿಸುಗಳನ್ನು ನೀಡಿ /ಕೊಟ್ಟು ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಷೂಜೆಯನ್ನು /ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ” ಎಂದು ಅದು ತಿಳಿಸಿದೆ.

“ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆಯೆಂದು ತಿಳಿದು ಪೂಜಿಸುವ ಸಂಪ್ರದಾಯ/ ಪದ್ದತಿ ಬಿಡಬಾರದೆಂಬ ದೃಷ್ಠಿಯಿಂದ, ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸತ್ಸಂಪ್ರದಾಯ ಮುಂದುವರೆಸುವ ದೃಷ್ಠಿಯಿಂದ ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ /ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ, ಸನಾತನ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು, ಸಂಪ್ರಾದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ /ಬಲಿಪಾಡ್ಯಮಿಯ ಹಬ್ಬದ ದಿನದಂದು ‘ಗೋ ಪೂಜೆ’ ನೆಡೆಸಿ ಜಾರಿಗೊಳಿಸುವುದು ಸೂಕ್ತವು, ಶಾಸ್ತ್ರ ಸಮೃತವು ಆಗಿರುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...