Homeಕರ್ನಾಟಕಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತೆ ಜನರ ಕಿಸಿಗೆ ಕತ್ತರಿ ಹಾಕುತ್ತಿದ್ದು, ರಾಜ್ಯದ ಎಲ್ಲಾ ವಿದ್ಯುತ್‌ ಕಂಪನಿಗಳ ವಿದ್ಯುತ್‌ ದರವನ್ನು ಸರಾಸರಿ 5.4% ದಂತೆ, ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೊರಡಿಸಿರುವ 2020-21 ನೇ ಸಾಲಿನ ವಿದ್ಯುತ್‌ ಪರಿಷ್ಕೃತ ದರವು ನವೆಂಬರ್‌ 1 ರಿಂದಲೇ ಅನ್ವಯವಾಗಲಿದೆ.

2020-21 ರ ಸಾಲಿನ ಪರಿಷ್ಕೃತ ದರ ನವೆಂಬರ್‌ 1 ರಿಂದ ಅನ್ವಯವಾಗುವುದಿದ್ದರೂ, ಲಾಕ್‌ಡೌನ್‌ ಅವಧಿಯ 7 ತಿಂಗಳ ದರಗಳನ್ನು ಮುಂದಿನ ಸಾಲಿನಲ್ಲಿ ವಸೂಲು ಮಾಡಲಾಗುತ್ತದೆ ಎಂದು ಕೆಇಆರ್‌ಸಿ ಹೇಳಿದ್ದು, 2021-22 ನೇ ಸಾಲಿನ ದರಗಳು ಮತ್ತೆ ಪರಿಷ್ಕರಣೆಯಾಗಲಿವೆ ಎಂದು ಅದು ಸ್ಪಷ್ಟಪಡಿಸಿದೆ. ಹಾಗಾಗಿ ಈ ಹೊಸ ದರಗಳು ನವೆಂಬರ್‌ 1 ರಿಂದ ಮಾರ್ಚ್ 31ರ ವರೆಗಿನ ಐದು ತಿಂಗಳಿಗೆ ಮಾತ್ರ ಅನ್ವಯವಾಗಲಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ಸ್ಲಾಬ್‌‌ನಲ್ಲಿ ಬದಲಾವಣೆ ಇಲ್ಲ

ದರ ನಿಗದಿಗೆ ಈಗ ಮೊದಲ ಸ್ಪ್ಯಾಬ್‌ನ್ನು 30 ಯುನಿಟ್‌ಗೆ ನಿಗದಿಪಡಿಸಲಾಗಿದ್ದು ಅದನ್ನು 50 ಕ್ಕೆ ಏರಸಬೇಕು ಎಂದು ನಾಗರಿಕ ಸಂಘಟನೆಗಳು ಬೇಡಿಕೆ ಸಲ್ಲಿಸಿದ್ದವು ಆದರೆ ಕೆಇಆರ್‌ಸಿ‌ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಸ್ಲಾಬ್‌ಗಳ ಪರಿಷ್ಕರಣೆಯಲ್ಲಿ ಎಲ್ಲ ವರ್ಗದ ಗ್ರಾಹಕರು ಅಂದರೆ, ಗೃಹ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 25 ಪೈಸೆಯವರೆಗೆ ಹೆಚ್ಚಿಸಲು ಆಯೋಗ ಒಪ್ಪಿಗೆ ನೀಡಿದೆ. ಆದರೆ, ಇದು ಬೆಂಗಳೂರು ಮೆಟ್ರೊ ಮತ್ತು ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಚಾರ್ಜಿಂಗ್‌ ಕೇಂದ್ರಗಳಿಗೆ ಅನ್ವಯಿಸುವುದಿಲ್ಲ. ತಾತ್ಕಾಲಿಕ ವಿದ್ಯುತ್ ಅಳವಡಿಕೆಯ ಬಳಕೆದಾರರಿಗೆ ಹೆಚ್ಚಿನ ಏರಿಕೆ ಮಾಡಲಾಗಿದ್ದು, ಪ್ರತಿ ಯೂನಿಟ್‌ಗೆ 50 ಪೈಸೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ನಿಭಾಯಿಸಲು ರಾಜ್ಯ ಸರ್ಕಾರವು ವಿಫಲವಾಗಿದ್ದೆಲ್ಲಿ?

ಒಂದು ವರ್ಷ ವಿದ್ಯುತ್‌ ದರ ಹೆಚ್ಚಿಸದಂತೆ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸ ವಿದ್ಯುತ್ ದರ ಪಟ್ಟಿ ಹೀಗಿದೆ.

ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಇದುವರೆಗೂ 30 ಯೂನಿಟ್‌ಗಳಿಗೆ ₹ 3.75 ಪಾವತಿಸುತ್ತಿದ್ದು, ಇನ್ನು ಮುಂದೆ ಪ್ರತಿ ಯೂನಿಟ್‌ಗೆ ₹ 4 ಪಾವತಿಸಬೇಕಾಗುತ್ತದೆ. ಅದೇ ರೀತಿ ಈ ಹಿಂದೆ ತಿಂಗಳಿಗೆ 100 ಯೂನಿಟ್‌ಗಳಷ್ಟು ವಿದ್ಯುತ್‌ ಬಳಸುತ್ತಿದ್ದವರು ಪ್ರತಿ ಯೂನಿಟ್‌ಗೆ ₹5.20 ಪಾವತಿಸಬೇಕಾಗುತ್ತಿತ್ತು. ಇನ್ನು ಮುಂದೆ ಪ್ರತಿ ಯುನಿಟ್‌ಗೆ ₹ 5.45 ಪಾತಿಸಬೇಕು.

ಬೆಸ್ಕಾಂ ಹೊರತುಪಡಿಸಿ ಉಳಿದ ಎಸ್ಕಾಂಗಳ ನಗರಪಾಲಿಕೆ/ ಪೌರ ಸಂಸ್ಥೆಗಳ ಗೃಹ ಬಳಕೆಯ ಮೊದಲ 30 ಯೂನಿಟ್‌ವರೆಗೆ ₹ 3.70 ರಿಂದ ₹ 3.95 ಕ್ಕೆ ಏರಿಸಲಾಗಿದೆ. 31-100 ಯೂನಿಟ್‌ವರೆಗೆ ₹ 5.20 ರಿಂದ ₹ 5.45 ರೂ.ಗೆ ಪಾವತಿಸಬೇಕಾಗುತ್ತದೆ.

ಗ್ರಾಮೀಣ ಪ್ರದೇಶಗಳಿಗೆ ಈ ದರಗಳು 30 ಯೂನಿಟ್‌ವರೆಗೆ ₹ 3.60 ರಿಂದ ₹ 3.85 ಕ್ಕೆ ಏರಿಸಲಾಗಿದೆ, 31-100 ಯೂನಿಟ್‌ವರೆಗೆ ₹ 4.90 ರಿಂದ ₹ 5.15 ಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...