Homeಕರ್ನಾಟಕಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತೆ ಜನರ ಕಿಸಿಗೆ ಕತ್ತರಿ ಹಾಕುತ್ತಿದ್ದು, ರಾಜ್ಯದ ಎಲ್ಲಾ ವಿದ್ಯುತ್‌ ಕಂಪನಿಗಳ ವಿದ್ಯುತ್‌ ದರವನ್ನು ಸರಾಸರಿ 5.4% ದಂತೆ, ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೊರಡಿಸಿರುವ 2020-21 ನೇ ಸಾಲಿನ ವಿದ್ಯುತ್‌ ಪರಿಷ್ಕೃತ ದರವು ನವೆಂಬರ್‌ 1 ರಿಂದಲೇ ಅನ್ವಯವಾಗಲಿದೆ.

2020-21 ರ ಸಾಲಿನ ಪರಿಷ್ಕೃತ ದರ ನವೆಂಬರ್‌ 1 ರಿಂದ ಅನ್ವಯವಾಗುವುದಿದ್ದರೂ, ಲಾಕ್‌ಡೌನ್‌ ಅವಧಿಯ 7 ತಿಂಗಳ ದರಗಳನ್ನು ಮುಂದಿನ ಸಾಲಿನಲ್ಲಿ ವಸೂಲು ಮಾಡಲಾಗುತ್ತದೆ ಎಂದು ಕೆಇಆರ್‌ಸಿ ಹೇಳಿದ್ದು, 2021-22 ನೇ ಸಾಲಿನ ದರಗಳು ಮತ್ತೆ ಪರಿಷ್ಕರಣೆಯಾಗಲಿವೆ ಎಂದು ಅದು ಸ್ಪಷ್ಟಪಡಿಸಿದೆ. ಹಾಗಾಗಿ ಈ ಹೊಸ ದರಗಳು ನವೆಂಬರ್‌ 1 ರಿಂದ ಮಾರ್ಚ್ 31ರ ವರೆಗಿನ ಐದು ತಿಂಗಳಿಗೆ ಮಾತ್ರ ಅನ್ವಯವಾಗಲಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ಸ್ಲಾಬ್‌‌ನಲ್ಲಿ ಬದಲಾವಣೆ ಇಲ್ಲ

ದರ ನಿಗದಿಗೆ ಈಗ ಮೊದಲ ಸ್ಪ್ಯಾಬ್‌ನ್ನು 30 ಯುನಿಟ್‌ಗೆ ನಿಗದಿಪಡಿಸಲಾಗಿದ್ದು ಅದನ್ನು 50 ಕ್ಕೆ ಏರಸಬೇಕು ಎಂದು ನಾಗರಿಕ ಸಂಘಟನೆಗಳು ಬೇಡಿಕೆ ಸಲ್ಲಿಸಿದ್ದವು ಆದರೆ ಕೆಇಆರ್‌ಸಿ‌ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಸ್ಲಾಬ್‌ಗಳ ಪರಿಷ್ಕರಣೆಯಲ್ಲಿ ಎಲ್ಲ ವರ್ಗದ ಗ್ರಾಹಕರು ಅಂದರೆ, ಗೃಹ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 25 ಪೈಸೆಯವರೆಗೆ ಹೆಚ್ಚಿಸಲು ಆಯೋಗ ಒಪ್ಪಿಗೆ ನೀಡಿದೆ. ಆದರೆ, ಇದು ಬೆಂಗಳೂರು ಮೆಟ್ರೊ ಮತ್ತು ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಚಾರ್ಜಿಂಗ್‌ ಕೇಂದ್ರಗಳಿಗೆ ಅನ್ವಯಿಸುವುದಿಲ್ಲ. ತಾತ್ಕಾಲಿಕ ವಿದ್ಯುತ್ ಅಳವಡಿಕೆಯ ಬಳಕೆದಾರರಿಗೆ ಹೆಚ್ಚಿನ ಏರಿಕೆ ಮಾಡಲಾಗಿದ್ದು, ಪ್ರತಿ ಯೂನಿಟ್‌ಗೆ 50 ಪೈಸೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ನಿಭಾಯಿಸಲು ರಾಜ್ಯ ಸರ್ಕಾರವು ವಿಫಲವಾಗಿದ್ದೆಲ್ಲಿ?

ಒಂದು ವರ್ಷ ವಿದ್ಯುತ್‌ ದರ ಹೆಚ್ಚಿಸದಂತೆ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸ ವಿದ್ಯುತ್ ದರ ಪಟ್ಟಿ ಹೀಗಿದೆ.

ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಇದುವರೆಗೂ 30 ಯೂನಿಟ್‌ಗಳಿಗೆ ₹ 3.75 ಪಾವತಿಸುತ್ತಿದ್ದು, ಇನ್ನು ಮುಂದೆ ಪ್ರತಿ ಯೂನಿಟ್‌ಗೆ ₹ 4 ಪಾವತಿಸಬೇಕಾಗುತ್ತದೆ. ಅದೇ ರೀತಿ ಈ ಹಿಂದೆ ತಿಂಗಳಿಗೆ 100 ಯೂನಿಟ್‌ಗಳಷ್ಟು ವಿದ್ಯುತ್‌ ಬಳಸುತ್ತಿದ್ದವರು ಪ್ರತಿ ಯೂನಿಟ್‌ಗೆ ₹5.20 ಪಾವತಿಸಬೇಕಾಗುತ್ತಿತ್ತು. ಇನ್ನು ಮುಂದೆ ಪ್ರತಿ ಯುನಿಟ್‌ಗೆ ₹ 5.45 ಪಾತಿಸಬೇಕು.

ಬೆಸ್ಕಾಂ ಹೊರತುಪಡಿಸಿ ಉಳಿದ ಎಸ್ಕಾಂಗಳ ನಗರಪಾಲಿಕೆ/ ಪೌರ ಸಂಸ್ಥೆಗಳ ಗೃಹ ಬಳಕೆಯ ಮೊದಲ 30 ಯೂನಿಟ್‌ವರೆಗೆ ₹ 3.70 ರಿಂದ ₹ 3.95 ಕ್ಕೆ ಏರಿಸಲಾಗಿದೆ. 31-100 ಯೂನಿಟ್‌ವರೆಗೆ ₹ 5.20 ರಿಂದ ₹ 5.45 ರೂ.ಗೆ ಪಾವತಿಸಬೇಕಾಗುತ್ತದೆ.

ಗ್ರಾಮೀಣ ಪ್ರದೇಶಗಳಿಗೆ ಈ ದರಗಳು 30 ಯೂನಿಟ್‌ವರೆಗೆ ₹ 3.60 ರಿಂದ ₹ 3.85 ಕ್ಕೆ ಏರಿಸಲಾಗಿದೆ, 31-100 ಯೂನಿಟ್‌ವರೆಗೆ ₹ 4.90 ರಿಂದ ₹ 5.15 ಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...