Homeಕರ್ನಾಟಕಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತೆ ಜನರ ಕಿಸಿಗೆ ಕತ್ತರಿ ಹಾಕುತ್ತಿದ್ದು, ರಾಜ್ಯದ ಎಲ್ಲಾ ವಿದ್ಯುತ್‌ ಕಂಪನಿಗಳ ವಿದ್ಯುತ್‌ ದರವನ್ನು ಸರಾಸರಿ 5.4% ದಂತೆ, ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೊರಡಿಸಿರುವ 2020-21 ನೇ ಸಾಲಿನ ವಿದ್ಯುತ್‌ ಪರಿಷ್ಕೃತ ದರವು ನವೆಂಬರ್‌ 1 ರಿಂದಲೇ ಅನ್ವಯವಾಗಲಿದೆ.

2020-21 ರ ಸಾಲಿನ ಪರಿಷ್ಕೃತ ದರ ನವೆಂಬರ್‌ 1 ರಿಂದ ಅನ್ವಯವಾಗುವುದಿದ್ದರೂ, ಲಾಕ್‌ಡೌನ್‌ ಅವಧಿಯ 7 ತಿಂಗಳ ದರಗಳನ್ನು ಮುಂದಿನ ಸಾಲಿನಲ್ಲಿ ವಸೂಲು ಮಾಡಲಾಗುತ್ತದೆ ಎಂದು ಕೆಇಆರ್‌ಸಿ ಹೇಳಿದ್ದು, 2021-22 ನೇ ಸಾಲಿನ ದರಗಳು ಮತ್ತೆ ಪರಿಷ್ಕರಣೆಯಾಗಲಿವೆ ಎಂದು ಅದು ಸ್ಪಷ್ಟಪಡಿಸಿದೆ. ಹಾಗಾಗಿ ಈ ಹೊಸ ದರಗಳು ನವೆಂಬರ್‌ 1 ರಿಂದ ಮಾರ್ಚ್ 31ರ ವರೆಗಿನ ಐದು ತಿಂಗಳಿಗೆ ಮಾತ್ರ ಅನ್ವಯವಾಗಲಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ಸ್ಲಾಬ್‌‌ನಲ್ಲಿ ಬದಲಾವಣೆ ಇಲ್ಲ

ದರ ನಿಗದಿಗೆ ಈಗ ಮೊದಲ ಸ್ಪ್ಯಾಬ್‌ನ್ನು 30 ಯುನಿಟ್‌ಗೆ ನಿಗದಿಪಡಿಸಲಾಗಿದ್ದು ಅದನ್ನು 50 ಕ್ಕೆ ಏರಸಬೇಕು ಎಂದು ನಾಗರಿಕ ಸಂಘಟನೆಗಳು ಬೇಡಿಕೆ ಸಲ್ಲಿಸಿದ್ದವು ಆದರೆ ಕೆಇಆರ್‌ಸಿ‌ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಸ್ಲಾಬ್‌ಗಳ ಪರಿಷ್ಕರಣೆಯಲ್ಲಿ ಎಲ್ಲ ವರ್ಗದ ಗ್ರಾಹಕರು ಅಂದರೆ, ಗೃಹ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 25 ಪೈಸೆಯವರೆಗೆ ಹೆಚ್ಚಿಸಲು ಆಯೋಗ ಒಪ್ಪಿಗೆ ನೀಡಿದೆ. ಆದರೆ, ಇದು ಬೆಂಗಳೂರು ಮೆಟ್ರೊ ಮತ್ತು ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಚಾರ್ಜಿಂಗ್‌ ಕೇಂದ್ರಗಳಿಗೆ ಅನ್ವಯಿಸುವುದಿಲ್ಲ. ತಾತ್ಕಾಲಿಕ ವಿದ್ಯುತ್ ಅಳವಡಿಕೆಯ ಬಳಕೆದಾರರಿಗೆ ಹೆಚ್ಚಿನ ಏರಿಕೆ ಮಾಡಲಾಗಿದ್ದು, ಪ್ರತಿ ಯೂನಿಟ್‌ಗೆ 50 ಪೈಸೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ನಿಭಾಯಿಸಲು ರಾಜ್ಯ ಸರ್ಕಾರವು ವಿಫಲವಾಗಿದ್ದೆಲ್ಲಿ?

ಒಂದು ವರ್ಷ ವಿದ್ಯುತ್‌ ದರ ಹೆಚ್ಚಿಸದಂತೆ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸ ವಿದ್ಯುತ್ ದರ ಪಟ್ಟಿ ಹೀಗಿದೆ.

ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಇದುವರೆಗೂ 30 ಯೂನಿಟ್‌ಗಳಿಗೆ ₹ 3.75 ಪಾವತಿಸುತ್ತಿದ್ದು, ಇನ್ನು ಮುಂದೆ ಪ್ರತಿ ಯೂನಿಟ್‌ಗೆ ₹ 4 ಪಾವತಿಸಬೇಕಾಗುತ್ತದೆ. ಅದೇ ರೀತಿ ಈ ಹಿಂದೆ ತಿಂಗಳಿಗೆ 100 ಯೂನಿಟ್‌ಗಳಷ್ಟು ವಿದ್ಯುತ್‌ ಬಳಸುತ್ತಿದ್ದವರು ಪ್ರತಿ ಯೂನಿಟ್‌ಗೆ ₹5.20 ಪಾವತಿಸಬೇಕಾಗುತ್ತಿತ್ತು. ಇನ್ನು ಮುಂದೆ ಪ್ರತಿ ಯುನಿಟ್‌ಗೆ ₹ 5.45 ಪಾತಿಸಬೇಕು.

ಬೆಸ್ಕಾಂ ಹೊರತುಪಡಿಸಿ ಉಳಿದ ಎಸ್ಕಾಂಗಳ ನಗರಪಾಲಿಕೆ/ ಪೌರ ಸಂಸ್ಥೆಗಳ ಗೃಹ ಬಳಕೆಯ ಮೊದಲ 30 ಯೂನಿಟ್‌ವರೆಗೆ ₹ 3.70 ರಿಂದ ₹ 3.95 ಕ್ಕೆ ಏರಿಸಲಾಗಿದೆ. 31-100 ಯೂನಿಟ್‌ವರೆಗೆ ₹ 5.20 ರಿಂದ ₹ 5.45 ರೂ.ಗೆ ಪಾವತಿಸಬೇಕಾಗುತ್ತದೆ.

ಗ್ರಾಮೀಣ ಪ್ರದೇಶಗಳಿಗೆ ಈ ದರಗಳು 30 ಯೂನಿಟ್‌ವರೆಗೆ ₹ 3.60 ರಿಂದ ₹ 3.85 ಕ್ಕೆ ಏರಿಸಲಾಗಿದೆ, 31-100 ಯೂನಿಟ್‌ವರೆಗೆ ₹ 4.90 ರಿಂದ ₹ 5.15 ಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...