HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...