HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...