HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...