HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...