HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...