Homeಕರ್ನಾಟಕಮೋದಿ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ - ಸಿದ್ದರಾಮಯ್ಯ

ಮೋದಿ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ – ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬೆಲೆ ನಿಯಂತ್ರಣ ಮಾಡಲಾಗದ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳು ಲೆಕ್ಕದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಕೂಡಾ ಮೋದಿಯವರ ಸುಳ್ಳುಗಳನ್ನೇ ಇಲ್ಲಿ ಬಾಯಿಪಾಠ ಒಪ್ಪಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರದಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಬರೆದಿರುವ ಸಿದ್ದರಾಮಯ್ಯ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47, ಪೆಟ್ರೋಲ್ ಬೆಲೆ ರೂ.75ರ ಗಡಿಯೊಳಗೆ ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. 2014 ರಿಂದ ಈ ವರೆಗೆ ಕಚ್ಚಾತೈಲ ದರ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರೂ ಅದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಒಕ್ಕೂಟ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದ್ದ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಜೊತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

“ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ರೂ.3.45 ಹಾಗೂ ಪೆಟ್ರೋಲ್ ಮೇಲೆ ರೂ.9.20 ಅಬಕಾರಿ ಸುಂಕ ಇತ್ತು. ನರೇಂದ್ರ ಮೋದಿ ಆಡಳಿತದಲ್ಲಿ ಅಬಕಾರಿ ಸುಂಕ ಡೀಸೆಲ್ ಮೇಲೆ ರೂ. 31.84 ಹಾಗೂ ಪೆಟ್ರೋಲ್ ಮೇಲೆ ರೂ. 32.98 ಆಗಿದೆ. ಇದರಲ್ಲಿ 50% ಕಡಿಮೆ ಮಾಡಲಿ. ಅವರ ಸರ್ಕಾರ ಡೀಸೆಲ್, ಪೆಟ್ರೋಲ್ ಮೇಲಿನ ಅಬಕಾರಿ ಸುಂಕದ ಮೂಲಕ ರೂ. 23 ಲಕ್ಷ ಕೋಟಿ ಸಂಗ್ರಹಿಸಿದೆ. 2020-21 ರಲ್ಲಿ ಸಂಗ್ರಹಿಸಿದ ಅಬಕಾರಿ ಸುಂಕ ರೂ. 3 ಲಕ್ಷದ 35 ಸಾವಿರ ಕೋಟಿ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕದಿಂದ ರೂ.1 ಲಕ್ಷ 20 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ” ಎಂದು ಹೇಳಿದ್ದಾರೆ.

“ಪೆಟ್ರೋಲ್ ಬೆಲೆಯೇರಿಕೆಗೆ ತೈಲ ಬಾಂಡ್ ಕಾರಣ ಎನ್ನುವುದು ಶುದ್ದ ಸುಳ್ಳು. 2006 ರಿಂದ 2010 ರವರೆಗೆ ಖರೀದಿಸಿದ್ದು ರೂ. 1.40 ಲಕ್ಷ ಕೋಟಿ ಮೌಲ್ಯದ ತೈಲಬಾಂಡ್. ಮನಮೋಹನ್ ಸಿಂಗ್ ನೇತೃತ್ವದ ಯು.ಪಿ.ಎ ಸರ್ಕಾರ ರೂ. 5,762 ಕೋಟಿ ತೈಲಬಾಂಡ್ ಮರುಪಾವತಿಸಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ರೂ. 30,923 ಕೋಟಿ ಬೆಲೆಯ ತೈಲ ಬಾಂಡ್‌ಗಳನ್ನಷ್ಟೇ ಮರುಪಾವತಿಸಬೇಕಾಗಿದೆ. ಒಕ್ಕೂಟ ಸರ್ಕಾರ ಒಂದೇ ವರ್ಷದಲ್ಲಿ ಸಂಗ್ರಹಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದಲ್ಲಿ ಒಟ್ಟು ಸಾಲವೇ ತೀರಿಹೋಗುತ್ತದೆ. ಹಾಗಾಗಿ ತೆರಿಗೆಯನ್ನು 50% ಕಡಿತಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ ರೂ. 3 ಕಡಿಮೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರ ಯಾಕೆ ತೆರಿಗೆ ಕಡಿತಗೊಳಿಸಬಾರದು? ಆಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಇಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

“ಜಿ.ಎಸ್.ಟಿ ಬಂದಮೇಲೆ ರಾಜ್ಯಗಳಿಗಿದ್ದ ತೆರಿಗೆ ಸಂಗ್ರಹದ ಅವಕಾಶ ಇಲ್ಲದಂತಾಗಿ ಆದಾಯ ಇಳಿಮುಖವಾಗಿದೆ. ಈ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರವನ್ನು ನೀಡಬೇಕಾಗಿದೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಈ ಪರಿಹಾರವನ್ನೂ ಕೊಡದೆ ನೀವೆ ಸಾಲ ತಗೊಳ್ಳಿ ಎಂದು ಹೇಳುತ್ತಿರುವುದು ಯಾವ ನ್ಯಾಯ?” ಎಂದು ಅವರು ತಿಳಿಸಿದ್ದಾರೆ.

“15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ, ರಾಜ್ಯದ ಪಾಲನ್ನು 4.71% ಇಂದ 3.64% ಗೆ ಇಳಿಸಲಾಗಿದೆ. ಹಿಂದೆ ರಾಜ್ಯದ ಪಾಲು, ವಿಶೇಷ ಅನುದಾನ ಸೇರಿ ಒಟ್ಟು ರೂ. 80,000 ಕೋಟಿ ರಾಜ್ಯಕ್ಕೆ ಬರುತ್ತಿತ್ತು, ಆದರೆ ಈಗ ರೂ. 38,000 ಮಾತ್ರ ಬರುತ್ತಿದೆ. ಇದಕ್ಕೆ ಯಾರು ಹೊಣೆ? 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ್ದ ರೂ. 5,495 ವಿಶೇಷ ಅನುದಾನವನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕಾರ ಮಾಡಿದರು, ಅದನ್ನು ಕೇಳುವ ಧೈರ್ಯ ಈ ಪುಕ್ಕಲು ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ. ಭಂಡ ಸರ್ಕಾರ ಇದು. ಇವತ್ತು ಆಟೋ ಚಾಲಕರು, ಕ್ಯಾಬ್ ಚಾಲಕರು, ಟ್ರ್ಯಾಕ್ಟರ್ ಇರುವ ರೈತರು, ಬಸ್ ಮಾಲೀಕರು, ಲಾರಿ ಮಾಲೀಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಗೋಳನ್ನಾಗಲಿ, ವಿರೋಧಪಕ್ಷಗಳ ಹೋರಾಟವನ್ನಾಗಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಗಣನೆಗೆ ತೆಗೆದುಕೊಳ್ಳದಷ್ಟು ಭಂಡತನವನ್ನು ಬೆಳೆಸಿಕೊಂಡಿದೆ. ಮಾಧ್ಯಮಗಳು ಜನರ ಬವಣೆಗೆ ದನಿಯಾದರೆ ಸರ್ಕಾರಗಳು ಎಚ್ಚೆತ್ತುಕೊಳ್ಳಬಹುದೇನೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...