Homeಕರ್ನಾಟಕಮೋದಿ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ - ಸಿದ್ದರಾಮಯ್ಯ

ಮೋದಿ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ – ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬೆಲೆ ನಿಯಂತ್ರಣ ಮಾಡಲಾಗದ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳು ಲೆಕ್ಕದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಕೂಡಾ ಮೋದಿಯವರ ಸುಳ್ಳುಗಳನ್ನೇ ಇಲ್ಲಿ ಬಾಯಿಪಾಠ ಒಪ್ಪಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರದಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಬರೆದಿರುವ ಸಿದ್ದರಾಮಯ್ಯ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47, ಪೆಟ್ರೋಲ್ ಬೆಲೆ ರೂ.75ರ ಗಡಿಯೊಳಗೆ ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. 2014 ರಿಂದ ಈ ವರೆಗೆ ಕಚ್ಚಾತೈಲ ದರ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರೂ ಅದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಒಕ್ಕೂಟ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದ್ದ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಜೊತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

“ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ರೂ.3.45 ಹಾಗೂ ಪೆಟ್ರೋಲ್ ಮೇಲೆ ರೂ.9.20 ಅಬಕಾರಿ ಸುಂಕ ಇತ್ತು. ನರೇಂದ್ರ ಮೋದಿ ಆಡಳಿತದಲ್ಲಿ ಅಬಕಾರಿ ಸುಂಕ ಡೀಸೆಲ್ ಮೇಲೆ ರೂ. 31.84 ಹಾಗೂ ಪೆಟ್ರೋಲ್ ಮೇಲೆ ರೂ. 32.98 ಆಗಿದೆ. ಇದರಲ್ಲಿ 50% ಕಡಿಮೆ ಮಾಡಲಿ. ಅವರ ಸರ್ಕಾರ ಡೀಸೆಲ್, ಪೆಟ್ರೋಲ್ ಮೇಲಿನ ಅಬಕಾರಿ ಸುಂಕದ ಮೂಲಕ ರೂ. 23 ಲಕ್ಷ ಕೋಟಿ ಸಂಗ್ರಹಿಸಿದೆ. 2020-21 ರಲ್ಲಿ ಸಂಗ್ರಹಿಸಿದ ಅಬಕಾರಿ ಸುಂಕ ರೂ. 3 ಲಕ್ಷದ 35 ಸಾವಿರ ಕೋಟಿ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕದಿಂದ ರೂ.1 ಲಕ್ಷ 20 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ” ಎಂದು ಹೇಳಿದ್ದಾರೆ.

“ಪೆಟ್ರೋಲ್ ಬೆಲೆಯೇರಿಕೆಗೆ ತೈಲ ಬಾಂಡ್ ಕಾರಣ ಎನ್ನುವುದು ಶುದ್ದ ಸುಳ್ಳು. 2006 ರಿಂದ 2010 ರವರೆಗೆ ಖರೀದಿಸಿದ್ದು ರೂ. 1.40 ಲಕ್ಷ ಕೋಟಿ ಮೌಲ್ಯದ ತೈಲಬಾಂಡ್. ಮನಮೋಹನ್ ಸಿಂಗ್ ನೇತೃತ್ವದ ಯು.ಪಿ.ಎ ಸರ್ಕಾರ ರೂ. 5,762 ಕೋಟಿ ತೈಲಬಾಂಡ್ ಮರುಪಾವತಿಸಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ರೂ. 30,923 ಕೋಟಿ ಬೆಲೆಯ ತೈಲ ಬಾಂಡ್‌ಗಳನ್ನಷ್ಟೇ ಮರುಪಾವತಿಸಬೇಕಾಗಿದೆ. ಒಕ್ಕೂಟ ಸರ್ಕಾರ ಒಂದೇ ವರ್ಷದಲ್ಲಿ ಸಂಗ್ರಹಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದಲ್ಲಿ ಒಟ್ಟು ಸಾಲವೇ ತೀರಿಹೋಗುತ್ತದೆ. ಹಾಗಾಗಿ ತೆರಿಗೆಯನ್ನು 50% ಕಡಿತಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ ರೂ. 3 ಕಡಿಮೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರ ಯಾಕೆ ತೆರಿಗೆ ಕಡಿತಗೊಳಿಸಬಾರದು? ಆಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಇಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

“ಜಿ.ಎಸ್.ಟಿ ಬಂದಮೇಲೆ ರಾಜ್ಯಗಳಿಗಿದ್ದ ತೆರಿಗೆ ಸಂಗ್ರಹದ ಅವಕಾಶ ಇಲ್ಲದಂತಾಗಿ ಆದಾಯ ಇಳಿಮುಖವಾಗಿದೆ. ಈ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರವನ್ನು ನೀಡಬೇಕಾಗಿದೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಈ ಪರಿಹಾರವನ್ನೂ ಕೊಡದೆ ನೀವೆ ಸಾಲ ತಗೊಳ್ಳಿ ಎಂದು ಹೇಳುತ್ತಿರುವುದು ಯಾವ ನ್ಯಾಯ?” ಎಂದು ಅವರು ತಿಳಿಸಿದ್ದಾರೆ.

“15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ, ರಾಜ್ಯದ ಪಾಲನ್ನು 4.71% ಇಂದ 3.64% ಗೆ ಇಳಿಸಲಾಗಿದೆ. ಹಿಂದೆ ರಾಜ್ಯದ ಪಾಲು, ವಿಶೇಷ ಅನುದಾನ ಸೇರಿ ಒಟ್ಟು ರೂ. 80,000 ಕೋಟಿ ರಾಜ್ಯಕ್ಕೆ ಬರುತ್ತಿತ್ತು, ಆದರೆ ಈಗ ರೂ. 38,000 ಮಾತ್ರ ಬರುತ್ತಿದೆ. ಇದಕ್ಕೆ ಯಾರು ಹೊಣೆ? 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ್ದ ರೂ. 5,495 ವಿಶೇಷ ಅನುದಾನವನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕಾರ ಮಾಡಿದರು, ಅದನ್ನು ಕೇಳುವ ಧೈರ್ಯ ಈ ಪುಕ್ಕಲು ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ. ಭಂಡ ಸರ್ಕಾರ ಇದು. ಇವತ್ತು ಆಟೋ ಚಾಲಕರು, ಕ್ಯಾಬ್ ಚಾಲಕರು, ಟ್ರ್ಯಾಕ್ಟರ್ ಇರುವ ರೈತರು, ಬಸ್ ಮಾಲೀಕರು, ಲಾರಿ ಮಾಲೀಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಗೋಳನ್ನಾಗಲಿ, ವಿರೋಧಪಕ್ಷಗಳ ಹೋರಾಟವನ್ನಾಗಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಗಣನೆಗೆ ತೆಗೆದುಕೊಳ್ಳದಷ್ಟು ಭಂಡತನವನ್ನು ಬೆಳೆಸಿಕೊಂಡಿದೆ. ಮಾಧ್ಯಮಗಳು ಜನರ ಬವಣೆಗೆ ದನಿಯಾದರೆ ಸರ್ಕಾರಗಳು ಎಚ್ಚೆತ್ತುಕೊಳ್ಳಬಹುದೇನೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...