Homeಕರ್ನಾಟಕHijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ...

Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಲೇಜುಗಳ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಿದೆ. ಈ ವೇಳೆ ರಾಜ್ಯ ಸರ್ಕಾರವು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕೂರಿಸಿರುವುದರ ಬಗ್ಗೆ ನ್ಯಾಯಾಲಯದ ಮುಂದೆ ಸುಳ್ಳು ಹೇಳಿದೆ.

ವಿಚಾರಣೆ ವೇಳೆ ಕುಂದಾಪುರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್‌ ಕಾಮತ್‌, “ನಿನ್ನೆ ಹಿಜಾಬ್ ಧರಿಸಿದ ಹುಡುಗಿಯರನ್ನು ಒಳಗೆ ಪ್ರವೇಶಿಸಲು ಅನುಮತಿಸಲಾಯಿತು ಆದರೆ ಪ್ರತ್ಯೇಕ ಸಭಾಂಗಣದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಯಿತು” ಎಂದು ಸೋಮವಾರಂದು ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದ ಘಟನೆಯನ್ನು ನ್ಯಾಯಾಲಯದ ಗಮನಕ್ಕೆ ತರುತ್ತಾರೆ.

ಇದನ್ನೂ ಓದಿ: Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಈ ವೇಳೆ ಜಸ್ಟಿಸ್ ದೀಕ್ಷಿತ್, “ಇದು ಅಮೇರಿಕನ್ ಪ್ರಕರಣದಂತೆಯೇ, ಪ್ರತ್ಯೇಕ ಆದರೆ ಸಮಾನತೆ ತರವೇ?” ಎಂದು ಪ್ರಶ್ನಿಸುತ್ತಾರೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕೂರಿಸುವುದು ‘ಧಾರ್ಮಿಕ ವರ್ಣಭೇದ ನೀತಿ’ ಮತ್ತು ‘ಅಸ್ಪೃಶ್ಯತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ’ ಎಂದು ಕಾಮತ್ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಇದನ್ನೂ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಇಂಥ ಆಧಾರರಹಿತ ಹೇಳಿಕೆ ನೀಡಬಾರದು. ಇದು ನಮ್ಮಂಥ ಸೂಕ್ಷ್ಮವಾದ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟು ಮಾಡಬಹುದು. ನ್ಯಾಯಾಲಯದಲ್ಲಿ ಕಾನೂನಾತ್ಮಕವಾಗಿ ಇರಬೇಕು, ರಾಜಕೀಯವಾಗಿ ಅಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ದೇವದತ್‌ ಕಾಮತ್‌ ಅವರು, “ಹೀಗೆ ಪ್ರತ್ಯೇಕವಾಗಿ ಕೂರಿಸುವುದು ಆರ್ಟಿಕಲ್ 14 ರ ಉಲ್ಲಂಘನೆಯಾಗಿದೆ ಎಂಬುದು ನನ್ನ ಸಲ್ಲಿಕೆಯಾಗಿದೆ. ನ್ಯಾಯಾಲಯದ ಒಳಗೆ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ಹೇಳುತ್ತಾರೆ. ಈ ವೇಳೆ ನ್ಯಾಯಮೂರ್ತಿ ದೀಕ್ಷಿತ್ ಅವರು ಕಾಮತ್ ಅವರ ವಾದಗಳನ್ನು ಸಾರಾಂಶವಾಗಿ ಟಿಪ್ಪಣಿ ಮಾಡುತ್ತಾರೆ.

ಇದನ್ನೂ ಓದಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಇದರ ನಂತರ ಹಿಜಾಬ್ ಧರಿಸಿದ ಮಕ್ಕಳನ್ನು ಪ್ರತ್ಯೇಕವಾಗಿ ಕೂರಿಸಲಾಗಿದೆ ಎಂದು ಕಾಮತ್ ಅವರ ಹೇಳಿಕೆಯನ್ನು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮತ್ತೆ ಆಕ್ಷೇಪಿಸಿ, ಇಂತಹ ಹೇಳಿಕೆಗಳು ದೂರಗಾಮಿ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳುತ್ತಾರೆ.

ಸೋಮವಾರದಂದು ಕುಂದಾಪುರ ಕಾಲೇಜು ಗೇಟಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಇತರ ವಿದ್ಯಾರ್ಥಿಗಳಿಂದ ದೂರವಿಟ್ಟು ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಇರುವಂತೆ ಸೂಚಿಸಲಾಗಿತ್ತು ಎಂದು ಎಎನ್‌ಐ ಸಹಿತ ಹಲವು ಮಾಧ್ಯಮಗಳು ಉಲ್ಲೇಖಿಸಿತ್ತು. ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಯಾವುದೇ ಪಾಠ ಇರಲಿಲ್ಲ ಎಂದು ಮಾಧ್ಯಮಗಳು ಉಲ್ಲೇಖಿಸಿತ್ತು.

ಜೂಮ್‌ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸಿದ್ದಾರೆ. ಈಗಾಗಲೇ ಹಿಜಾಬ್‌ ಪರವಾಗಿ ಹಲವಾರು ವಿಷಯಗಳನ್ನು ನ್ಯಾಯಾಲಯದಲ್ಲಿ ಹಿರಿಯ ವಕೀಲ ದೇವದತ್ತ ಕಾಮತ್‌ ಮಂಡಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...