Homeಕರ್ನಾಟಕರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ ಬಿಲ್ಲವ-ಈಡಿಗ ಸಮುದಾಯಕ್ಕೆ ‘ಕೋಶ’ದ ಬದಲು ‘ನಿಗಮ’ ಸ್ಥಾಪಿಸಲು ಒತ್ತಾಯ

- Advertisement -
- Advertisement -

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆ ಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆ ಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಈ ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆ ಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಸರ್ಕಾರ ಹೊಸದಾಗಿ ನೀಡಿರುವ ‘ಕೋಶ’ವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶ’ ಸ್ಥಾಪನೆ ಎಂಬುವುದು ಚುನಾವಣೆ ಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದ ಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

“ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದ ಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶ ಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆ” ಎಂದು ಅವರು ತಿಳಿಸಿದರು.

“ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಆ ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರ ಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನು ಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಈ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

“ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆ ‘ಏನೋ’ ನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆ ಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದ ಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆ ಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ”

“ಈ ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿ ಕೋಶದಲ್ಲೂ ನಡೆಯುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

“ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆ ಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತು ಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದು” ಎಂದು ಪದ್ಮರಾಜ್ ಆರ್‌‌. ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...