Homeಕರ್ನಾಟಕರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ ಬಿಲ್ಲವ-ಈಡಿಗ ಸಮುದಾಯಕ್ಕೆ ‘ಕೋಶ’ದ ಬದಲು ‘ನಿಗಮ’ ಸ್ಥಾಪಿಸಲು ಒತ್ತಾಯ

- Advertisement -
- Advertisement -

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆ ಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆ ಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಈ ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆ ಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಸರ್ಕಾರ ಹೊಸದಾಗಿ ನೀಡಿರುವ ‘ಕೋಶ’ವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶ’ ಸ್ಥಾಪನೆ ಎಂಬುವುದು ಚುನಾವಣೆ ಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದ ಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

“ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದ ಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶ ಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆ” ಎಂದು ಅವರು ತಿಳಿಸಿದರು.

“ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಆ ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರ ಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನು ಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಈ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

“ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆ ‘ಏನೋ’ ನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆ ಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದ ಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆ ಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ”

“ಈ ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿ ಕೋಶದಲ್ಲೂ ನಡೆಯುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

“ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆ ಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತು ಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದು” ಎಂದು ಪದ್ಮರಾಜ್ ಆರ್‌‌. ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...