Homeಕರ್ನಾಟಕರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ ಬಿಲ್ಲವ-ಈಡಿಗ ಸಮುದಾಯಕ್ಕೆ ‘ಕೋಶ’ದ ಬದಲು ‘ನಿಗಮ’ ಸ್ಥಾಪಿಸಲು ಒತ್ತಾಯ

- Advertisement -
- Advertisement -

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆ ಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆ ಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಈ ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆ ಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಸರ್ಕಾರ ಹೊಸದಾಗಿ ನೀಡಿರುವ ‘ಕೋಶ’ವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶ’ ಸ್ಥಾಪನೆ ಎಂಬುವುದು ಚುನಾವಣೆ ಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದ ಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

“ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದ ಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶ ಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆ” ಎಂದು ಅವರು ತಿಳಿಸಿದರು.

“ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಆ ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರ ಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನು ಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಈ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

“ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆ ‘ಏನೋ’ ನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆ ಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದ ಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆ ಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ”

“ಈ ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿ ಕೋಶದಲ್ಲೂ ನಡೆಯುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

“ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆ ಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತು ಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದು” ಎಂದು ಪದ್ಮರಾಜ್ ಆರ್‌‌. ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...