Homeಕರ್ನಾಟಕರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ ಬಿಲ್ಲವ-ಈಡಿಗ ಸಮುದಾಯಕ್ಕೆ ‘ಕೋಶ’ದ ಬದಲು ‘ನಿಗಮ’ ಸ್ಥಾಪಿಸಲು ಒತ್ತಾಯ

- Advertisement -
- Advertisement -

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆ ಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆ ಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಈ ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆ ಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಸರ್ಕಾರ ಹೊಸದಾಗಿ ನೀಡಿರುವ ‘ಕೋಶ’ವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶ’ ಸ್ಥಾಪನೆ ಎಂಬುವುದು ಚುನಾವಣೆ ಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದ ಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

“ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದ ಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶ ಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆ” ಎಂದು ಅವರು ತಿಳಿಸಿದರು.

“ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಆ ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರ ಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನು ಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಈ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

“ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆ ‘ಏನೋ’ ನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆ ಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದ ಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆ ಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ”

“ಈ ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿ ಕೋಶದಲ್ಲೂ ನಡೆಯುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

“ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆ ಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತು ಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದು” ಎಂದು ಪದ್ಮರಾಜ್ ಆರ್‌‌. ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...