Homeಕರ್ನಾಟಕಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

ಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

- Advertisement -
- Advertisement -

ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲು ಖಾಸಗಿ ಪ್ರಯೋಗಾಲಯಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಪರೀಕ್ಷೆಗೆ 4500 ರೂ ನಿಗದಿಪಡಿಸಬಹುದು ಎಂದು ಹೇಳಿದೆ.

20/03/2020 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಯನ್ನು ಈ ಕೆಳಗಿನ ಕೊರೊನ ವೈರಸ್ ಶಂಕಿತರಿಗೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಿದೆ:

  • ಕಳೆದ 14 ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಗೊಂಡ ರೋಗ ಲಕ್ಷಣ ಇರುವ ಎಲ್ಲಾ ವ್ಯಕ್ತಿಗಳು.
  • ಪ್ರಯೋಗಾಲಯ ಖಚಿತ ಪಡಿಸಿದ ರೋಗಿಗಳ ಸಂಪರ್ಕದಲ್ಲಿದ್ದ ರೋಗ ಲಕ್ಷಣಗಳಿರುವ ಎಲ್ಲಾ ವ್ಯಕ್ತಿಗಳಿಗೆ.
  • ರೋಗ ಲಕ್ಷಣವಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ.
  • ತೀವ್ರವಾದ ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ.
  • ಕೊರೊನಾ ಸೋಂಕು ದೃಢವಾದವರ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಅವನ / ಅವಳ ಸಂಪರ್ಕಕ್ಕೆ ಬಂದ ನಂತರದ 5 ನೇ ದಿನ ಮತ್ತು 14 ನೇ ದಿನದ ನಡುವೆ ಒಮ್ಮೆ ಪರೀಕ್ಷಿಸಬೇಕು.

ಇದನ್ನೂ ಓದಿ: ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!


ಸುತ್ತೋಲೆಯಲ್ಲಿ ಪರೀಕ್ಷೆ ನಡೆಸುವ ಬೆಂಗಳೂರಿನ ಎರಡು ಪ್ರಯೋಗಾಲಯಗಳನ್ನು ಹೆಸರಿದೆ ಹಾಗೂ ಮೊದಲ ಹಂತದ ಪರೀಕ್ಷೆಗಾಗಿ 3000/ರೂ. ಹಾಗೂ ಹೆಚ್ಚುವರಿ ದೃಢೀಕರಣಕ್ಕಾಗಿ 1500/ರೂ. ಗಳನ್ನು ನಿಗಧಿಪಡಿಸಿದೆ. ಒಟ್ಟು ಪರೀಕ್ಷೆಯ ವೆಚ್ಚ 4500/ರೂ. ಗಳನ್ನು ಮೀರಬಾರದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಸರ್ಕಾರದ ಈ ನಡೆಯ ಬಗ್ಗೆ ಹಲವಾರು ಜನ ಟೀಕಿಸಿದ್ದಾರೆ. ಚಿಂತಕ ಕೆ.ಪಿ. ಸುರೇಶ್ ಅವರು “ಸರಕಾರ ಜನದ್ರೋಹ ಮಾಡುತ್ತಿದೆ. ವಿಮಾನದಿಂದಿಳಿದವರನ್ನು ಸರಿಯಾಗಿ ಪರೀಕ್ಷಿಸದೇ ಬಿಟ್ಟವರು ಈ ಮಾರಿಯನ್ನು ಉಳಿದವರಿಗೆ ಅಂಟಿಸಿದ್ದಕ್ಕೆ ಸಾಮಾನ್ಯರು ಬೆಲೆ ತೆರಬೇಕಾಗಿದೆ. ಅಗ್ಗದ ಟೆಸ್ಟಿಂಗ್ ಕಿಟ್ ಅಭಿವೃದ್ಧಿಪಡಿಸಿದ ವರದಿ ಈಗಾಗಲೆ ಇದೆ. ಅದನ್ನು ಉತ್ಪಾದಿಸಿ ಹಂಚುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಆದರೆ ಇಂಥಾ ವಿಷಯಗಳು ಬಂದಾಗ ಅದರಿಂದ ತಪ್ಪಿಸುವ ಕಲೆ ಕೇಂದ್ರ ಸರಕಾರಕ್ಕೆ ಸಿದ್ಧಿಸಿದೆ.” ಎಂದಿದ್ದಾರಲ್ಲದೆ, “ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಲ್ಲಾ ನಾಗರಿಕರಿಗೂ ಕೊರೊನಾ ಪರೀಕ್ಷೆ ಉಚಿತ ಎಂದು ಮಾರ್ಚ್ 15 ರಂದು ಹೇಳಿದ್ದರು. ಆದರೆ ಈಗ ಮೆತ್ತಗೆ ಜವಾಬ್ದಾರಿಯಿಂದ ಜಾರಿಕೊಂಡ ಕೇಂದ್ರದ ಮೋದಿ ಸರಕಾರ ಸುತ್ತೋಲೆ ಕಳುಹಿಸಿದೆ. ಕಳ್ಳಾಟಕ್ಕೂ ಒಂದು ಮಿತಿ ಬೇಕು.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...